ಸಂಗ್ರಹ ಚಿತ್ರ 
ರಾಜ್ಯ

ಮಂಡ್ಯ: ಕುಡಿಯುವ ನೀರಿನಲ್ಲಿ ವಿಷ ಬೆರಸಿ ಪತ್ನಿ, ಮಕ್ಕಳಿಬ್ಬರನ್ನು ಕೊಂದ ಪಾಪಿ!

ಕೌಟುಂಬಿಕ ಕಲಹದಿಂದ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರಸಿ ಹತ್ಯೆ ಮಾಡಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ: ಕೌಟುಂಬಿಕ ಕಲಹದಿಂದ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರಸಿ ಹತ್ಯೆ ಮಾಡಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಹೆಂಡತಿ ಮೇಲಿನ ಸಿಟ್ಟಿನಿಂದ ಪತಿ ನರಸಿಂಹ ನೀರಿನಲ್ಲಿ ವಿಷಬೆರೆಸಿ ಅದನ್ನು ಪತ್ನಿ ಮಕ್ಕಳಿಗೆ ಕುಡಿಸಿ ಕೊಂದಿರುವ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಮೃತರನ್ನು 23 ವರ್ಷದ ಪತ್ನಿ ಕೀರ್ತನಾ, ಮಕ್ಕಳಾದ ಜಯಸಿಂಹ (4), ರಿಷಿಕಾ(1) ಸಾವನ್ನಪ್ಪಿದ್ದಾರೆ.

ಐದು ವರ್ಷಗಳ ಹಿಂದೆ ನರಸಿಂಹ ಹಾಗೂ ಕೀರ್ತನಾ ಮದುವೆಯಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದರು. ಕಟ್ಟಿಂಗ್ ಶಾಪ್ ಇಟ್ಟುಕೊಂಡಿದ್ದ ನರಸಿಂಹ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಹೆಂಡತಿ ಆರೋಪಿಸಿದ್ದಳು. ಇದೇ ವಿಚಾರಕ್ಕೆ ಮನೆಯಲ್ಲಿ ಇಬ್ಬರ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಇದರಿಂದ ಆಕ್ರೋಶಗೊಂಡ ನರಸಿಂಹ ಪತ್ನಿ ಮತ್ತು ಮಕ್ಕಳ ಹತ್ಯೆ ಮಾಡುವ ನಿರ್ಧಾರಕ್ಕೆ ಬಂದಿದ್ದಾನೆ. ಪತ್ನಿ ಮತ್ತು ಮಕ್ಕಳಿಗೆ ವಿಷ ಬೆರಸಿದ ನೀರು ಕುಡಿಸಿ ಸಾಯಿಸಿದ ಬಳಿಕ ನರಸಿಂಹನೂ ಅದೇ ನೀರು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತೀವ್ರವಾಗಿ ಅಸ್ವಸ್ಥಗೊಂಡಿದ್ದ ನರಸಿಂಹಗೆ ಸದ್ಯ ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT