ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ 
ರಾಜ್ಯ

ವಕೀಲರ ಸಮ್ಮೇಳನದ ಹಣ ದುರ್ಬಳಕೆ: Karnataka Bar Council ಅಧ್ಯಕ್ಷ ವಿಶಾಲ್‌ ರಘು ವಿರುದ್ಧದ ತನಿಖೆ‌ಗೆ ಹೈಕೋರ್ಟ್‌ ತಡೆ

ಮೈಸೂರಿನಲ್ಲಿ ಕಳೆದ ವರ್ಷ ನಡೆದಿದ್ದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣಕಾಸು ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಸಿ) ಅಧ್ಯಕ್ಷರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಬೆಂಗಳೂರು: ಮೈಸೂರಿನಲ್ಲಿ ಕಳೆದ ವರ್ಷ ನಡೆದಿದ್ದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣಕಾಸು ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಸಿ) ಅಧ್ಯಕ್ಷರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ರಾಜ್ಯ ವಕೀಲರ ಸಮ್ಮೇಳನದ ವೇಳೆ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಮೊತ್ತದ ದುರುಪಯೋಗ ನಡೆದಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಸಿ) ಅಧ್ಯಕ್ಷರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಇದೇ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಭಾರತೀಯ ವಕೀಲರ ಪರಿಷತ್‌ (ಬಿಸಿಐ) ರಚಿಸಿರುವ ಮೂವರು ಸದಸ್ಯರ ಸಮಿತಿಗೂ ಹೈಕೋರ್ಟ್‌ನ ಮತ್ತೊಂದು ಪೀಠ ತಡೆ ವಿಧಿಸಿದೆ.

ತಮ್ಮ ವಿರುದ್ದದ ತನಿಖೆ ವಜಾ ಮಾಡುವಂತೆ ಕೋರಿ ಕೆಎಸ್‌ಬಿಸಿ ಅಧ್ಯಕ್ಷ ಎಚ್‌ ಎಲ್‌ ವಿಶಾಲ್‌ ರಘು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಪೀಠ ಶುಕ್ರವಾರ ನಡೆಸಿತು. “ಅರ್ಜಿದಾರ ವಿಶಾಲ್‌ ರಘು ಕೋರಿಕೆಯಂತೆ ಪ್ರಕರಣಕ್ಕೆ ತಡೆಯಾಜ್ಞೆ ವಿಧಿಸಲಾಗಿದೆ. ಎರಡನೇ ಪ್ರತಿವಾದಿಯು ಆಕ್ಷೇಪಣೆ ಸಲ್ಲಿಸಿ, ಆದೇಶದಲ್ಲಿ ಮಾರ್ಪಾಡಿಗೆ ಕೋರಬಹುದಾಗಿದೆ. ರಾಜ್ಯ ಸರ್ಕಾರದ ಪರವಾಗಿ ಎಚ್‌ಸಿಜಿಪಿ ನೋಟಿಸ್‌ ಪಡೆದಿದ್ದಾರೆ” ಎಂದು ನ್ಯಾಯಾಲಯ ಆದೇಶಿಸಿದೆ.

ಮೂವರು ಸದಸ್ಯರ ಸಮಿತಿ ನೇಮಕಕ್ಕೂ ತಡೆ

ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವೀಕರಿಸಿದ ದೂರಿನ ತನಿಖೆಗಾಗಿ ಮೂವರು ಸದಸ್ಯರ ಸಮಿತಿ ರಚಿಸಿ ಬಿಸಿಐ ಮಾಡಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ತಡೆಯಾಜ್ಞೆ ವಿಧಿಸಿದೆ. ಹಿರಿಯ ವಕೀಲ ಎಸ್‌ ಬಸವರಾಜು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಏಪ್ರಿಲ್‌ 12ರಂದು ಬಿಸಿಐ ಪ್ರಕರಣದ ತನಿಖೆಗಾಗಿ ಮೂವರು ಸಮಿತಿ ರಚಿಸಿ ಆದೇಶಿಸಿರುವುದು ಮತ್ತು ಮುಂದಿನ ಪ್ರಕ್ರಿಯೆಗೆ ತಡೆ ನೀಡಿದೆ.

ಅಲ್ಲದೇ ಪ್ರತಿವಾದಿಗಳಾದ ಬಿಸಿಐ, ಕೆಎಸ್‌ಬಿಸಿ ಅಧ್ಯಕ್ಷ ಎಚ್‌ ಎಲ್ ವಿಶಾಲ್‌ ರಘು‌ ಮತ್ತು ಉಪಾಧ್ಯಕ್ಷ ವಿನಯ್‌ ಮಂಗಳೇಕರ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಕೆಎಸ್‌ಬಿಸಿ ಮಾಜಿ ಅಧ್ಯಕ್ಷ ಆನಂದ್‌ ಕುಮಾರ್‌ ಮಗದುಮ್‌ ಅವರು ಏಪ್ರಿಲ್‌ 5ರಂದು ನೀಡಿದ ದೂರನ್ನು ಆಧರಿಸಿ ಬಿಸಿಐ ಹಿರಿಯ ವಕೀಲ ಅಪೂರ್ಬ ಕುಮಾರ್‌ ಶರ್ಮಾ ನೇತೃತ್ವದಲ್ಲಿ ಮೂವರ ಸಮಿತಿ ರಚಿಸಿದ್ದು, ಆರೋಪದ ತನಿಖೆ ಮಾಡುವಂತೆ ಆದೇಶಿಸಿತ್ತು.

ಅಮಿತ್‌ ವೇದ್‌ ಮತ್ತು ಭಕ್ತ ಭೂಷಣ್‌ ಬರೀಕ್‌ ಸಮಿತಿಯ ಮತ್ತಿಬ್ಬರು ಸದಸ್ಯರಾಗಿದ್ದಾರೆ. ಮೈಸೂರಿನ ವಕೀಲರ ಸಮಾವೇಶಕ್ಕೆ ಸಂಬಂಧಿಸಿದ ಖರ್ಚು-ವೆಚ್ಚದ ದಾಖಲೆಗಳನ್ನು ಸಲ್ಲಿಸುವಂತೆ ಕೆಎಸ್‌ಬಿಸಿ ಕಾರ್ಯದರ್ಶಿಗೆ ಬಿಸಿಐ ಸೂಚಿಸಿತ್ತು. ತನಿಖೆ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಸ್‌ಬಿಸಿ ಸದಸ್ಯರು ಮತ್ತು ವಕೀಲರು ಯಾವುದೇ ಹೇಳಿಕೆ ನೀಡದಂತೆ ನಿರ್ಬಂಧಿಸಿ ಆದೇಶಿಸಿದೆ.

ದೂರಿನಲ್ಲೇನಿದೆ?

ರಾಜ್ಯ ವಕೀಲರ ಪರಿಷತ್‌ ವತಿಯಿಂದ ಮೈಸೂರಿನಲ್ಲಿ 2023ರ ಆಗಸ್ಟ್‌ 12 ಮತ್ತು 13ರಂದು ಎರಡು ದಿನಗಳ ಕಾಲ ರಾಜ್ಯ ವಕೀಲರ ಸಮ್ಮೇಳನ ಆಯೋಜಿಸಿತ್ತು. ಈ ಸಮಯದಲ್ಲಿ ಸಮ್ಮೇಳನದ ಪ್ರತಿನಿಧಿ ವಕೀಲರಿಂದ ತಲಾ 1 ಸಾವಿರ ರೂ ನಂತೆ ಒಟ್ಟು 1,16,33,000 ರೂ ಮೊತ್ತವನ್ನು ದೇಣಿಗೆಯಾಗಿ ಸಂಗ್ರಹಿಸಲಾಗಿತ್ತು. ರಾಜ್ಯ ಸರ್ಕಾರ 1.8 ಲಕ್ಷ ರೂ ಅನುದಾನ ನೀಡಿತ್ತು ಮತ್ತು ರಾಜ್ಯ ವಕೀಲರ ಪರಿಷತ್‌ನಿಂದ 75 ಲಕ್ಷ ರೂ ಬಿಡುಗಡೆಯಾಗಿತ್ತು.

ಒಟ್ಟು ಮೊತ್ತ 3,30,33,000 ರೂ ಸಂಗ್ರಹವಾಗಿತ್ತು. ಈ ಹಣ ಪರಿಷತ್‌ನ ಬ್ಯಾಂಕ್‌ ಖಾತೆಗೆ ಜಮೆ ಆಗಿದ್ದು, ಈ ಹಣದ ಬಳಕೆಯಲ್ಲಿ ದುರುಪಯೋಗ ನಡೆದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಅಧ್ಯಕ್ಷರು ಮತ್ತು ಇತರರು ಸೇರಿಕೊಂಡು ಪರಿಷತ್‌ನ 50 ಲಕ್ಷ ರೂ ಮೊತ್ತವನ್ನು ಬ್ಯಾಂಕ್‌ನಿಂದ ನಗದೀಕರಿಸಿಕೊಂಡಿದ್ದಾರೆ. ಸುಳ್ಳು ಲೆಕ್ಕಪತ್ರ ಸೃಷ್ಟಿಸಿ, ವಕೀಲರ ಸಮುದಾಯಕ್ಕೆ ಸೇರಿದ ಕೋಟ್ಯಂತರ ರೂಪಾಯಿಯನ್ನು, ನಕಲಿ ಬಿಲ್‌ ತಯಾರಿಸಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ.

ಸರ್ಕಾರಕ್ಕೆ ಸಲ್ಲಿಸಬೇಕಾದ ಜಿಎಸ್‌ಟಿ ಹಣವನ್ನು ಸಲ್ಲಿಸದೇ ಮೋಸ ಮಾಡುವ ಉದ್ದೇಶದಿಂದ ಪರಿಷತ್ತಿನ ಸಮುದಾಯಕ್ಕೆ ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ದೂರಿನಲ್ಲಿ ಬಸವರಾಜ್‌ ಎಂಬುವವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT