ಸಂಗ್ರಹ ಚಿತ್ರ 
ರಾಜ್ಯ

ಕಟ್ಟಡ ನಿರ್ಮಾಣಕ್ಕೆ 10 ಎಂಎಲ್‌ಡಿ ಸಂಸ್ಕರಿತ ನೀರು: BWSSB

ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 10 ಎಂಎಲ್‌ಡಿ ಸಂಸ್ಕರಿಸಿದ ನೀರು ಸರಬರಾಜು ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಿದ್ಧವಿದೆ ಎಂದು ಅಧ್ಯಕ್ಷ ಡಾ. ವಿ ರಾಮ್‌ಪ್ರಸಾತ್‌ ಮನೋಹರ್‌ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 10 ಎಂಎಲ್‌ಡಿ ಸಂಸ್ಕರಿಸಿದ ನೀರು ಸರಬರಾಜು ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಿದ್ಧವಿದೆ ಎಂದು ಅಧ್ಯಕ್ಷ ಡಾ. ವಿ ರಾಮ್‌ಪ್ರಸಾತ್‌ ಮನೋಹರ್‌ ಅವರು ಶುಕ್ರವಾರ ಹೇಳಿದರು.

ಕ್ರೆಡೈ ಹಾಗೂ ಬೆಂಗಳೂರು ಅಪಾರ್ಟ್‌ಮೆಂಟ್‌ ಅಸೋಸಿಯೇಷನ್‌ (ಬಿಎಎಫ್‌) ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಈ ವೇಳೆ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಉತ್ತಮ ಗುಣಮಟ್ಟದ ಸಂಸ್ಕರಿಸಿದ ನೀರನ್ನು ತಲುಪಿಸಲು ಮಂಡಳಿಯ ಬದ್ಧತೆಯನ್ನು ಒತ್ತಿ ಹೇಳಿದ ಅವರು, ನಿರ್ಮಾಣ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಬೇಡಿಕೆಯನ್ನು ವಿವರಿಸುವ ಸಮಗ್ರ ವರದಿಯನ್ನು ನೀಡುವಂತೆ ಅವರು ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಕ್ರೆಡೈ) ಗೆ ನಿರ್ದೇಶನ ನೀಡಿದರು.

ಜಲಮಂಡಳಿ 10 ಎಂಎಲ್‌ಡಿ ಸಂಸ್ಕರಿಸಿದ ನೀರು ಸರಬರಾಜು ವ್ಯವಸ್ಥೆ ಹೊಂದಿದ್ದು, ಬಿಎಎಫ್‌ ತನ್ನಲ್ಲಿರುವ ಸಂಸ್ಕರಿಸಿದ ನೀರಿನ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು. ಕಟ್ಟಡ ಕಾಮಗಾರಿಗಳಿಗೆ ಬೇಕಾಗಿರುವ ನೀರಿನ ಬೇಡಿಕೆಯನ್ನು ಕ್ರೆಡೈ ಸಲ್ಲಿಸಬೇಕು ಎಂದು ಹೇಳಿದರು.

ಪ್ರಸ್ತುತ ಕಟ್ಟಡ ನಿರ್ಮಾಣ ಕ್ಷೇತ್ರದಿಂದ ಸಂಸ್ಕರಿತ ನೀರಿಗೆ ಬೇಡಿಕೆ ಇದೆ. ಐಟಿ ಕಂಪನಿಗಳು ಹಾಗೂ ವಾಣಿಜ್ಯ ಸಂಸ್ಥೆಗಳೂ ಸಂಸ್ಕರಿತ ನೀರು ಬಳಸುವಂತೆ ಜಲಮಂಡಳಿ ಸೂಚಿಸುತ್ತಿದೆ. ಜಲಮಂಡಳಿ ಇದೀಗ 1,200 ಎಂಎಲ್‌ಡಿ ಸಂಸ್ಕರಿತ ನೀರನ್ನು ಉತ್ಪಾದಿಸುತ್ತಿದೆ. ಅಧಿಕ ನೀರು ಬಳಸುವ ಗ್ರಾಹಕರೂ ತಮ್ಮಲ್ಲೇ ಸಂಸ್ಕರಿಸುತ್ತಿರುವ ನೀರನ್ನು ಇದೀಗ ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಅಂತಹ ಗ್ರಾಹಕರಿಗೆ ನಾವು ಪೂರೈಸುತ್ತಿರುವ ನೀರಿನಲ್ಲಿ ಶೇ 20ರಷ್ಟು ಕಡಿತಗೊಳಿಸಿದ್ದೇವೆ. ಹೀಗಾಗಿ ಅವರಿಗೆ ಸಂಸ್ಕರಿಸಿದ ನೀರಿನ ಮೌಲ್ಯದ ಅರಿವಾಗಿದೆ ಎಂದು ತಿಳಿಸಿದರು.

ಸಂಸ್ಕರಿಸಿದ ನೀರಿನ ಗುಣಮಟ್ಟ ಖಾತರಿಗಾಗಿ ‘ಥರ್ಡ್‌ ಪಾರ್ಟಿ’ ಪ್ರಯೋಗಾಲಯದ ಮೂಲಕ ಪ್ರಮಾಣ ಪತ್ರ ನೀಡಲಾಗುವುದು. ಹೊಸ ತಂತ್ರಜ್ಞಾನ ಅಳವಡಿಸಿ ಸಂಸ್ಕರಿಸಿದ ನೀರಿನ ಗುಣಮಟ್ಟವನ್ನೂ ಉತ್ತಮಗೊಳಿಸಲಾಗುವುದು. ದೊಡ್ಡ ಯೋಜನೆಗಳಿಗೆ ಅಧಿಕ ಪ್ರಮಾಣದ ಸಂಸ್ಕರಿತ ನೀರು ಅಗತ್ಯವಿದ್ದು, ಅವರು ಬೇಡಿಕೆ ಸಲ್ಲಿಸಿದರೆ ಒಂದರಿಂದ ಎರಡು ಕಿ.ಮೀ ಒಳಗಿನ ಅಂತರದಲ್ಲಿರುವ ಎಸ್‌ಟಿಪಿಗಳಿಂದ ಪೈಪ್‌ಲೈನ್‌ ಅಳವಡಿಸಲು ಚಿಂತಿಸಲಾಗುವುದು ಎಂದರು.

ನಿರ್ಮಾಣ ಯೋಜನೆಗಳು ಮತ್ತು ನೀರಿನ ಬೇಡಿಕೆಯನ್ನು ವಿವರಿಸುವ ಸಮಗ್ರ ವರದಿಗಳನ್ನು ಸಲ್ಲಿಸುವ ಕಾರ್ಯವನ್ನು CREDAI ಪದಾಧಿಕಾರಿಗಳಿಗೆ ವಹಿಸಲಾಗಿದೆ. ಏಕಕಾಲದಲ್ಲಿ, ಬೆಂಗಳೂರು ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಸಂಸ್ಕರಿತ ನೀರಿನ ಲಭ್ಯತೆಯ ಕುರಿತು ವಲಯವಾರು ಡೇಟಾವನ್ನು ಇದು ಒದಗಿಸುತ್ತದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT