ಆರ್‌ಸಿಬಿ 
ರಾಜ್ಯ

ಗೋ ಗ್ರೀನ್ ಅಭಿಯಾನ: ನಗರದ ಕೆರೆಗಳಿಗೆ ಮರುಜೀವ ನೀಡಿ, ಕನ್ನಡಿಗರ ಮನಗೆದ್ದ RCB!

ಐಪಿಎಲ್ ಆಟದಲ್ಲಿ ಮುಗ್ಗರಿಸಿದ್ದರೂ ಸಾಮಾಜಿಕ ಕಾರ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕನ್ನಡಿಗರ ಮನಗೆದ್ದಿದೆ.

ಬೆಂಗಳೂರು: ಐಪಿಎಲ್ ಆಟದಲ್ಲಿ ಮುಗ್ಗರಿಸಿದ್ದರೂ ಸಾಮಾಜಿಕ ಕಾರ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕನ್ನಡಿಗರ ಮನಗೆದ್ದಿದೆ.

ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಆರ್‌ಸಿಬಿ ಪೂರ್ಣಗೊಳಿಸಿದೆ. ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆಯಲ್ಲಿ ನಾಗರಿಕ ಸೌಲಭ್ಯಗಳನ್ನು ಹೆಚ್ಚಿಸಿದೆ. ಇಂಡಿಯಾ ಕೇರ್ಸ್‌ ಫೌಂಡೇಶನ್‌ ಈ ಕುರಿತು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇಟ್ಟಗಲ್ಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವತ್ತ ಗಮನ ಹರಿಸಿ ಆರ್‌ಸಿಬಿ 2023ರ ಅಕ್ಟೋಬರ್‌ನಲ್ಲಿ ಇಎಸ್‌ಜಿ ಬದ್ಧತೆಯ ಭಾಗವಾಗಿ ಕೆರೆಗಳ ಸುಧಾರಣಾ ಕಾರ್ಯ ಯೋಜನೆಯನ್ನು ಕೈಗೆತ್ತಿಕೊಂಡಿತ್ತು.

1000 ರಿಂದ 1500 ಅಡಿಗಳವರೆಗಿನ ಬೋರ್‌ವೆಲ್‌ ಆಳವನ್ನು ಹೊಂದಿರುವ ಈ ಕೆರೆಗಳನ್ನು ಹೆಚ್ಚು ನೀರಿನ ಒತ್ತಡದ ಪ್ರದೇಶಗಳಾಗಿ ಆಯ್ಕೆ ಮಾಡಲಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ ಮತ್ತು ಸಂಪೂರ್ಣವಾಗಿ ಅಂತರ್ಜಲ ಮತ್ತು ಮೇಲ್ಮೈ ನೀರಿನ ಮೇಲೆ ಅವಲಂಬಿತವಾಗಿವೆ.

ವರದಿಯ ಪ್ರಕಾರ, ಇಟ್ಟಗಲ್ಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ 1.20 ಲಕ್ಷ ಟನ್‌ ಹೂಳು ಮತ್ತು ಮರಳನ್ನು ತೆಗೆಯಲಾಗಿದ್ದು, ಇದನ್ನು ಕೆರೆಗಳಿಗೆ ಅಡ್ಡಲಾಗಿ ಕಟ್ಟೆಗಳು ಮತ್ತು ಮಾರ್ಗಗಳನ್ನು ನಿರ್ಮಿಸಲು ಬಳಸಲಾಗಿದೆ ಮತ್ತು 52 ರೈತರು ಮಣ್ಣನ್ನು ತಮ್ಮ ಹೊಲಗಳಿಗೆ ಮೇಲ್ಮಣ್ಣು ಆಗಿ ಬಳಸಿದ್ದಾರೆ. ಇದರಿಂದಾಗಿ ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ 17 ಎಕರೆಗಳಷ್ಟು ಹೆಚ್ಚಾಗಿದೆ.

ಏತನ್ಮಧ್ಯೆ, ಜೀವವೈವಿಧ್ಯವನ್ನು ಸುಧಾರಿಸುವ ಉದ್ದೇಶದಿಂದ ಕಣ್ಣೂರು ಕೆರೆಯ ಸುತ್ತಲೂ ಔಷಧೀಯ ಸಸ್ಯಗಳ ಉದ್ಯಾನವನ, ಬಿದಿರಿನ ಉದ್ಯಾನವನ ಮತ್ತು ಚಿಟ್ಟೆ ಪಾರ್ಕ್‌ಗಳನ್ನು ನಿರ್ಮಿಸಲಾಗಿದೆ. ಆರ್​ಸಿಬಿಯ ಈ ಕೆಲಸಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!