ಸಚಿವ ಕೆ.ಜೆ.ಜಾರ್ಜ್ 
ರಾಜ್ಯ

ಬರ ನಡುವಲ್ಲೂ ವಿದ್ಯುತ್ ಪರಿಸ್ಥಿತಿ ಸೂಕ್ತವಾಗಿ ನಿಭಾಯಿಸುತ್ತಿದ್ದೇವೆ: ಸಚಿವ ಕೆ.ಜೆ.ಜಾರ್ಜ್

ಬರಗಾಲದ ನಡುವೆಯೂ ರಾಜ್ಯ ಸರಕಾರ ವಿದ್ಯುತ್ ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಹೇಳಿದರು.

ಉಡುಪಿ: ಬರಗಾಲದ ನಡುವೆಯೂ ರಾಜ್ಯ ಸರಕಾರ ವಿದ್ಯುತ್ ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಇದ್ದರೂ ಈ ಬೇಸಿಗೆಯಲ್ಲಿ ಯಾವುದೇ ರೀತಿಯಲ್ಲೂ ಪವರ್ ಕಟ್ ಮಾಡುತ್ತಿಲ್ಲ. ಅದಕ್ಕೆ ಬೇಕಾದ ಎಲ್ಲ ರೀತಿಯ ಯೋಜನೆ ರೂಪಿಸಿಕೊಂಡಿದ್ದೇವೆ. ಬೇರೆ ಬೇರೆ ಮೂಲಗಳಿಂದ ಇಡೀ ರಾಜ್ಯಕ್ಕೆ ಬೇಕಾದ ವಿದ್ಯುತ್‌ನ್ನು ತರಿಸಿಕೊಂಡು ಜನರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಹೇಳಿದರು.

2014-15ರಲ್ಲಿ ಪಾವಗಡದಲ್ಲಿ 2,000 ಮೆಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಪಾರ್ಕ್ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಇತ್ತೀಚೆಗೆ ಪಾವಗಡಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ 10 ಸಾವಿರ ಎಕರೆ ಭೂಮಿಯನ್ನು ಗುತ್ತಿಗೆಗೆ ನೀಡಲು ರೈತರು ಮುಂದೆ ಬಂದಿದ್ದರು. ಮಧುಗಿರಿಯ ರೈತರೂ ಸೋಲಾರ್ ಪಾರ್ಕ್‌ಗೆ ಜಮೀನು ನೀಡಲು ಮುಂದೆ ಬಂದಿದ್ದಾರೆ. ಶೀಘ್ರದಲ್ಲೇ ಯೋಜನೆಯನ್ನು ಆರಂಭಿಸಲಿದ್ದೇವೆ. ಸಬ್ ಸ್ಟೇಷನ್ ಬಳಿ 750 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರಕ್ಕೆ ಟೆಂಡರ್ ಕರೆಯಲಾಗಿದೆ. ಇದು ಪ್ರಸರಣದಲ್ಲಿ ಕಳೆದುಹೋದ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಒಟ್ಟಾರೆಯಾಗಿ, ಭವಿಷ್ಯದಲ್ಲಿ ರಾಜ್ಯದ ಉಪ ಕೇಂದ್ರಗಳ ಬಳಿ 3,000 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಉಡುಪಿಯಲ್ಲಿರುವ ಅದಾನಿ ಪವರ್ ಲಿಮಿಟೆಡ್‌ನಂತಹ ಅಸ್ತಿತ್ವದಲ್ಲಿರುವ ಖಾಸಗಿ ಉಷ್ಣ ವಿದ್ಯುತ್ ಸ್ಥಾವರಗಳ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಬೆಂಬಲ ನೀಡಲಾಗುವುದು ಎಂದರು.

ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿಯವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ, ‘ಮತದಾರರು ಇಂಡಿಯಾ ಮೈತ್ರಿ ಒಕ್ಕೂಟ ಗೆಲ್ಲಬೇಕೆಂದು ಬಯಸಿದ್ದಾರೆಂದು ಹೇಳಿದರು.

ವಿದೇಶಿ ಬ್ಯಾಂಕ್‌ಗಳಲ್ಲಿ ಇಟ್ಟಿರುವ ಕಪ್ಪುಹಣ ವಾಪಸ್‌ ತರುತ್ತೇವೆ, ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುತ್ತೇವೆ ಎಂದು ಬಿಜೆಪಿ ಭರವಸೆ ನೀಡಿತ್ತು. ಅವರ ಬಹುತೇಕ ಭರವಸೆಗಳನ್ನು ಈಡೇರಿಸಿಲ್ಲ. ಭಾರತವು ಹೆಚ್ಚಿನ ಯುವಜನತೆಯನ್ನು ಹೊಂದಿದ್ದರೂ, ಜಿಡಿಪಿ ತೃಪ್ತಿಕರ ರೀತಿಯಲ್ಲಿ ಹೆಚ್ಚಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT