ಗೃಹ ಸಚಿವ ಪರಮೇಶ್ವರ್ 
ರಾಜ್ಯ

ಸತ್ಯ ಮುಚ್ಚಿಡಲು ಸಾಧ್ಯವಿಲ್ಲ, ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ: ಗೃಹ ಸಚಿವ

ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಹೇಳಿಕೆಯಿಂದ ಅವರ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ. ಆದರೆ, ಸತ್ಯವನ್ನು ಯಾವತ್ತೂ ಮುಚ್ಚಿಡಲು ಸಾಧ್ಯವಿಲ್ಲ. ತನಿಖೆ ಬಳಿಕ ಎಲ್ಲಾ ವಿಷಯ ಹೊರಬರುತ್ತೆ. ನಮಗೆ ಬಂದಿರುವ ವರದಿ ಪ್ರಕಾರ ಮಾತಾಡಿದ್ದೇವೆ ಎಂದು ಹೇಳಿದರು.

ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ವಿಚಾರವಾಗಿ ಮಾತನಾಡಿ, ಅವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಮಗೆ ಜವಾಬ್ದಾರಿ ಇದೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು. ತನಿಖೆಯಲ್ಲಿ ಎಲ್ಲಾ ಸತ್ಯ ಹೊರಬರಲಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಮೋದಿ ಭೇಟಿ ಕುರಿತು ಮಾತನಾಡಿ, ಮೋದಿ ಅವರು ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ಮುಂದೇನು ಕೂಡ ಬರುತ್ತಾರೆ. ನಾವು ಅನೇಕ ಪ್ರಶ್ನೆ ಕೇಳಿದ್ಧೇವೆ. ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದೀರಾ ಎಂದು ಕೇಳಿದ್ದೇವೆ. ಜಿಎಸ್ ಟಿ ಹಂಚಿಕೆ ಎಷ್ಟು ಕೊಟ್ಟಿದ್ದೀರಿ? ಭೀಕರ ಬರಗಾಲ ಇತ್ತು, ವಿಶೇಷ ಅನುದಾನ ಕೊಟ್ಟಿಲ್ಲ. 18 ಸಾವಿರ ಕೋಟಿ ಬರ ಪರಿಹಾರ ಪ್ರಸ್ತಾವನೆ ಇಡಲಾಗಿತ್ತು, ಅದನ್ನು ಕೊಟ್ಟಿಲ್ಲ. ಯಾವುದೇ ಹೊಸ ಯೋಜನೆ ಕೊಟ್ಟಿಲ್ಲ. ಭದ್ರ ಮೇಲ್ಡಂಡೆ ಯೋಜನೆಗೆ ಯಾವುದೇ ಸಹಕಾರ ಕೊಟ್ಟಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT