ಸಿಎಂ ಸಿದ್ದರಾಮಯ್ಯ  
ರಾಜ್ಯ

ನೇಹಾ ಕೊಲೆ ಪ್ರಕರಣ: ರಾಜಕೀಯಕ್ಕೆ ಒಬ್ಬರ ಸಾವು ಬಳಕೆ ಮಾಡಿಕೊಳ್ಳುತ್ತಿರುವುದು ದುರ್ದೈವ- ಸಿಎಂ ಸಿದ್ದರಾಮಯ್ಯ

ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಹೇಳಿಕೆ ಕುರಿತು ಮಾತನಾಡಿ, ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ, ಖಂಡನೀಯ ಎಂದು ತಿಳಿಸಿದರು.

ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು, ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಬಿಜೆಪಿಯವರ ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದು ಹೇಳಿದರು.

ಕಾಂಗ್ರೆಸ್ ನ ಚೊಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂಬ ಬಿಜೆಪಿ ತಿರುಗೇಟು ಕುರಿತು ಪ್ರತಿಕ್ರಿಯಿಸಿ, ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ. ಇದನ್ನು ತಿಳಿಸಲು ನಾವು ಜಾಹೀರಾತು ನೀಡಿದ್ದೇವೆ. ದೇಶದ ಜನರಿಗೆ 15 ಲಕ್ಷ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು , ಅಚ್ಚೇ ದಿನ್ ಬಂದಿದೆಯೇ? ಎಂದು ಪ್ರಶ್ನಿಸಿದರು.

ಮೋದಿ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೊಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲಾ ಗ್ಯಾರಂಟಿ ಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT