ಸಂಗ್ರಹ ಚಿತ್ರ 
ರಾಜ್ಯ

ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ನಿಷೇಧ: ನಿಯಮಗಳ ಗಾಳಿಗೆ ತೂರುತ್ತಿರುವ ರಾಜಕೀಯ ಪಕ್ಷಗಳು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮೇಲೆ ರಾಜ್ಯ ಸರ್ಕಾರ ನಿಷೇಧ ಹೇರಿದ್ದರೂ ಚುನಾವಣಾ ಪ್ರಚಾರ, ರ್ಯಾಲಿಗಳ ವೇಳೆ ರಾಜಕೀಯ ಪಕ್ಷಗಳು ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಕಂಡು ಬಂದಿದೆ. ನಿಯಮಗಳು ಉಲ್ಲಂಘನೆಯಾಗುತ್ತಿದ್ದು ಸಂಬಂಧಪಟ್ಟಂತಹ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.

ಬೆಂಗಳೂರು: ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮೇಲೆ ರಾಜ್ಯ ಸರ್ಕಾರ ನಿಷೇಧ ಹೇರಿದ್ದರೂ ಚುನಾವಣಾ ಪ್ರಚಾರ, ರ್ಯಾಲಿಗಳ ವೇಳೆ ರಾಜಕೀಯ ಪಕ್ಷಗಳು ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಕಂಡು ಬಂದಿದೆ. ನಿಯಮಗಳು ಉಲ್ಲಂಘನೆಯಾಗುತ್ತಿದ್ದು ಸಂಬಂಧಪಟ್ಟಂತಹ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.

ಪರಿಸರ ಸಂರಕ್ಷಣಾ ಕಾಯಿದೆ, 1986 ರ ಸೆಕ್ಷನ್ 5 ರ ಅಡಿಯಲ್ಲಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಕರ್ನಾಟಕದ ಘನತ್ಯಾಜ್ಯ ನಿರ್ವಹಣಾ ನಿಯಮಗಳು ಕೂಡ ಬಳಕೆಯನ್ನು ನಿಷೇಧ ಮಾಡಿದೆ.

ನಿಯಮ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರಚಾರ ಮತ್ತು ರ್ಯಾಲಿಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಭಾರತದ ಚುನಾವಣಾ ಆಯೋಗ ಕೂಡ ನಿರ್ದೇಶನಗಳನ್ನು ನೀಡಿದೆ. ಆದರೂ, ರಾಜಕೀಯ ಪಕ್ಷಗಳು ಮಾತ್ರ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಸಂಬಂಧಪಟ್ಟಂತಹ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಕಾರಣ ರಾಜಕೀಯ ಪಕ್ಷ ವಿರುದ್ಧವಾಗಲೀ, ಅಭ್ಯರ್ಥಿಗಳ ವಿರುದ್ಧವಾಗಲೀ ಅಥವಾ ಆಯೋಜಕರ ಮೇಲಾಗಲಿ ಒಂದೇ ಒಂದು ಪ್ರಕರಣವನ್ನೂ ದಾಖಲಿಸಿಲ್ಲ.

ರಾಜಕೀಯ ಕಾರ್ಯಕ್ರಮಗಳಿಗೆ ಅನುಮತಿ ನೀಡುವಾಗ ಪ್ಲಾಸ್ಟಿಕ್ ಬಳಕೆ ಇಲ್ಲದಂತೆ ನೋಡಿಕೊಳ್ಳುವುದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಬಿಬಿಎಂಪಿಯ ಹಿರಿಯ ಮಾರ್ಷಲ್ ಮಾತನಾಡಿ, "ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ, ಕೆಲವು ಸ್ಥಳಗಳಲ್ಲಿ ಮಾತ್ರ ತ್ಯಾಜ್ಯ ವಿಂಗಡಣೆ ನಡೆಯುತ್ತಿದೆ, ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ನಿಯಂತ್ರಣವಿಲ್ಲದಂತಾಗಿದೆ. ಪ್ಲಾಸ್ಟಿಕ್ ಬಾಟಲಿಗಳು ಸಂಗ್ರಹಿಸಿ ಮರುಬಳಕೆ ಮಾಡಲಾಗುತ್ತಿದೆ, ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳಿಗೆ ಕಡಿಮೆ ಗಮನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕೆಎಸ್‌ಪಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ನಿಯಮಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳುವುದು ಬಿಬಿಎಂಪಿಗೆ ಸಂಬಂಧಿಸಿದ್ದಾಗಿದೆ. ಇದುವರೆಗೆ ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ ಅಥವಾ ಸಂಘಟಕರ ವಿರುದ್ಧ ದೂರು ದಾಖಲಿಸಿಲ್ಲ ಎಂದು ಹೇಳಿದ್ದಾರೆ.

ಬಹುತೇಕ ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿರುವುದರಿಂದ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ವಿಚಾರಣೆ ಮಾಡುತ್ತೇವೆ ಮತ್ತು ದೂರು ಬಂದ ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ