ಸಾಂದರ್ಭಿಕ ಚಿತ್ರ 
ರಾಜ್ಯ

T20 World Cup: ಐರ್ಲೆಂಡ್, ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ: ಪರ-ವಿರೋಧ ಚರ್ಚೆ

ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಹಕಾರ ಹಾಲು ಉತ್ಪಾದರಕ ಮಹಾಮಂಡಳ (ಕೆಎಂಎಫ್) 2024ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲು ತೀರ್ಮಾನಿಸಿದ್ದು, ಕೆಎಂಎಫ್‌ನ ಈ ನಡೆ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಹಕಾರ ಹಾಲು ಉತ್ಪಾದರಕ ಮಹಾಮಂಡಳ (ಕೆಎಂಎಫ್) 2024ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲು ತೀರ್ಮಾನಿಸಿದ್ದು, ಕೆಎಂಎಫ್‌ನ ಈ ನಡೆ ವಿರುದ್ಧ ಟೀಕೆ ವ್ಯಕ್ತವಾಗಿದೆ.

'ಹೌದು, ನಾವು ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡುತ್ತಿದ್ದೇವೆ. ಅವರು ಪಂದ್ಯಗಳ ಸಮಯದಲ್ಲಿ ನಮ್ಮ ಬ್ರ್ಯಾಂಡ್ ಅನ್ನು ಪ್ರದರ್ಶಿಸಲಿದ್ದಾರೆ' ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ಭಾನುವಾರ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.'ನಂದಿನಿಯನ್ನು ಜಾಗತಿಕ ಬ್ರಾಂಡ್ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಮಧ್ಯಪ್ರಾಚ್ಯದಲ್ಲಿ ಈಗಾಗಲೇ ನಮ್ಮ ಮಳಿಗೆಗಳಿವೆ. ನಮ್ಮ ಉಪಸ್ಥಿತಿಯು ಸಿಂಗಾಪುರದಲ್ಲೂ ಇದೆ. ನಾವು ನಮ್ಮ ಸಿಹಿತಿಂಡಿಗಳನ್ನು ಅಮೆರಿಕದಲ್ಲಿ ಕೂಡ ಮಾರಾಟ ಮಾಡುತ್ತಿದ್ದೇವೆ' ಎಂದು ಜಗದೀಶ್ ವಿವರಿಸಿದರು.

ಇನ್ಫೋಸಿಸ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಟಿವಿ ಮೋಹನ್‌ದಾಸ್ ಪೈ ಕೆಎಂಎಫ್‌ನ ಈ ಕ್ರಮವನ್ನು ಟೀಕಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, 'ಎಂತಹ ದೊಡ್ಡ ಅವಮಾನ! ಅವರು ಕರ್ನಾಟಕದ ರೈತರಿಗೆ ಸೇರಿದ, ಕನ್ನಡಿಗರಾದ ಗ್ರಾಹಕರು ಪಾವತಿಸುವ ಹಣವನ್ನು ವಿದೇಶಿ ತಂಡಗಳಿಗೆ ಪ್ರಾಯೋಜಿಸಲು ಏಕೆ ಬಳಸುತ್ತಿದ್ದಾರೆ? ಅದು ಯಾವ ಮೌಲ್ಯವನ್ನು ನೀಡುತ್ತದೆ? ಬಡ ರೈತರಿಗೆ ಪಾವತಿಸುವುದು ಉತ್ತಮ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ಇದು ಕರ್ನಾಟಕ ಮೂಲದ ಸಹಕಾರ ಒಕ್ಕೂಟಕ್ಕೆ ಆಗುವ ವ್ಯರ್ಥ ನಡೆ!' ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್, 'ನಮ್ಮ ಆದಾಯದ ಶೇ 85 ರಷ್ಟು ರೈತರಿಗೆ ಹೋಗುತ್ತದೆ. ಉಳಿದಿದ್ದನ್ನು ನಮ್ಮ ಉತ್ಪನ್ನದ ಪ್ರಚಾರಕ್ಕಾಗಿ ಪ್ರಾಯೋಜಿಸುತ್ತಿದ್ದೇವೆ. ನಾವು ಜಾಗತಿಕವಾಗಿ ಹೋಗಬೇಕಾಗಿದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT