ಮರಿಯಾನೆ ಮೃತದೇಹದ ಬಳಿ ರೋಧಿಸುತ್ತಿರುವ ತಾಯಾನೆ. 
ರಾಜ್ಯ

ಹುಲಿ ದಾಳಿಗೆ ಆನೆ ಮರಿ ಸಾವು: ತಾಯಾನೆ ರೋಧನೆ, ಟ್ರಾಫಿಕ್ ಜಾಮ್

ಹುಲಿ ದಾಳಿಗೆ ಆನೆ ಮರಿಯೊಂದು ನಡು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.

ಮೈಸೂರು: ಹುಲಿ ದಾಳಿಗೆ ಆನೆ ಮರಿಯೊಂದು ನಡು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.

ಬಂಡೀಪುರ-ಊಟಿ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆ ಬದಿಯಲ್ಲಿ ಮರಿಯಾನೆ ಮೇವು ಮೆಯ್ಯುತ್ತಿದ್ದ ಸಂದರ್ಭ ಹುಲಿ ಏಕಾ ಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಈ ವೇಳೆ ಕೂಗಳತೆ ದೂರಲ್ಲಿದ್ದ ತಾಯಿಯಾನೆ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಹುಲಿ ಓಡಿ ಹೋಗಿದೆ.

ಬಳಿಕ ಸ್ಥಳಕ್ಕೆ ಆಗಮಿಸಿದ ತಾಯಿ ಆನೆ ತನ್ನ ಮರಿಯ ಶವವನ್ನು ಬಿಟ್ಟು ಕದಲದೆ ಕಣ್ಣೀರಾಕುತ್ತಾ ರೋಧಿಸಲು ಆರಂಭಿಸಿದೆ. ಇದರ ಮನಕಲಕುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮತ್ತೊಂದೆಡೆ ರಸ್ತೆ ಪಕ್ಕದಲ್ಲೇ ಆನೆ ಮರಿ ಸಾವನ್ನಪ್ಪಿರುವ ಹಿನ್ನೆಲೆ ಬಂಡೀಪುರ ಅರಣ್ಯ ವ್ಯಾಪ್ತಿಯ ಮೈಸೂರು ಊಟಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ವಾಹನಗಳು ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ಬಳಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅರಣ್ಯಾಧಿಕಾರಿಗಳು ಹರಸಾಹಸಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel