ಮರಿಯಾನೆ ಮೃತದೇಹದ ಬಳಿ ರೋಧಿಸುತ್ತಿರುವ ತಾಯಾನೆ. 
ರಾಜ್ಯ

ಹುಲಿ ದಾಳಿಗೆ ಆನೆ ಮರಿ ಸಾವು: ತಾಯಾನೆ ರೋಧನೆ, ಟ್ರಾಫಿಕ್ ಜಾಮ್

ಹುಲಿ ದಾಳಿಗೆ ಆನೆ ಮರಿಯೊಂದು ನಡು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.

ಮೈಸೂರು: ಹುಲಿ ದಾಳಿಗೆ ಆನೆ ಮರಿಯೊಂದು ನಡು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.

ಬಂಡೀಪುರ-ಊಟಿ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆ ಬದಿಯಲ್ಲಿ ಮರಿಯಾನೆ ಮೇವು ಮೆಯ್ಯುತ್ತಿದ್ದ ಸಂದರ್ಭ ಹುಲಿ ಏಕಾ ಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಈ ವೇಳೆ ಕೂಗಳತೆ ದೂರಲ್ಲಿದ್ದ ತಾಯಿಯಾನೆ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಹುಲಿ ಓಡಿ ಹೋಗಿದೆ.

ಬಳಿಕ ಸ್ಥಳಕ್ಕೆ ಆಗಮಿಸಿದ ತಾಯಿ ಆನೆ ತನ್ನ ಮರಿಯ ಶವವನ್ನು ಬಿಟ್ಟು ಕದಲದೆ ಕಣ್ಣೀರಾಕುತ್ತಾ ರೋಧಿಸಲು ಆರಂಭಿಸಿದೆ. ಇದರ ಮನಕಲಕುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮತ್ತೊಂದೆಡೆ ರಸ್ತೆ ಪಕ್ಕದಲ್ಲೇ ಆನೆ ಮರಿ ಸಾವನ್ನಪ್ಪಿರುವ ಹಿನ್ನೆಲೆ ಬಂಡೀಪುರ ಅರಣ್ಯ ವ್ಯಾಪ್ತಿಯ ಮೈಸೂರು ಊಟಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ವಾಹನಗಳು ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ಬಳಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅರಣ್ಯಾಧಿಕಾರಿಗಳು ಹರಸಾಹಸಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT