ತುಷಾರ್ ಗಿರಿನಾಥ್  
ರಾಜ್ಯ

ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ; Micro observer ಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಲೋಕಸಭಾ ಚುನಾವಣೆ ವೇಳೆ ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ ಎಂದು ಮೈಕ್ರೋ ಅಬ್ಸರ್ವರ್ಸ್'ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ ಎಂದು ಮೈಕ್ರೋ ಅಬ್ಸರ್ವರ್ಸ್'ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ-2024ರ ಸಂಬಂಧ ನಿಯಮಾನುಸಾರ ಮೈಕ್ರೋ ಅಬ್ಸರ್ವರ್ಸ್ (Micro observer) ಗಳಿಗೆ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ಶನಿವಾರ ತರಬೇತಿ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಾಜರಿದ್ದ ತುಷಾರ್ ಗಿರಿನಾತ್ ಅವರು ಅಗತ್ಯ ಮಾಹಿತಿಯನ್ನು ನೀಡಿದರು.

ಮತದಾನದ ದಿನದಂದು ಎಲ್ಲಾ ಮೈಕ್ರೋ ಅಬ್ಸರ್ವರ್ಸ್'ಗಳು ತಮಗೆ ನಿಯೋಜಿಸಲಾದ ಮತಗಟ್ಟೆಗಳ ಮೇಲೆ ನಿಗಾ ಇಡಬೇಕು. ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕೆಂದು ಹೇಳಿದರು.

ನಗರದ ಮೂರು ಲೋಕಸಭಾ ಕ್ಷೇತ್ರಗಳ 24 ವಿಧಾನಸಭಾ ಕ್ಷೇತ್ರಗಳು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಒಂದು ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲಿ 305 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ 365 ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸಲಾಗುತ್ತಿದೆ. ಜೊತೆಗೆ ವೀಡಿಯೊ ಮತ್ತು ವೆಬ್ ಕಾಸ್ಟಿಂಗ್ ಅನ್ನು ಸಹ ಮಾಡಲಾಗುತ್ತಿದೆ. ಮೈಕ್ರೋ ಅಬ್ಸರ್ವರ್ಸ್'ಗಳು ಮತಗಟ್ಟೆಗಳ ಬಳಿ ನಡೆಯುವ ಪ್ರಕ್ರಿಯೆಗಳ ಮೇಲೆ ನಿಗಾವಹಿಸಬೇಕು. ಮತದಾನದ ನಂತರ ಆ ಮತಗಟ್ಟೆಯಲ್ಲಿ ನಡೆದ ಚಟುವಟಿಕೆಗಳ ಬಗ್ಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.

ಬೆಂಗಳೂರು ದಕ್ಷಿಣದ ಜನರಲ್ ಅಬ್ಸರ್ವರ್ ಮಕರಂದ್ ಪಾಂಡುರಂಗ್ ಮಾತನಾಡಿ, ಮತದಾನದ ದಿನದಂದು ಮೈಕ್ರೋ ಅಬ್ಸರ್ವರ್‌ಗಳ ಪಾತ್ರ ಪ್ರಮುಖ ಪಾತ್ರ ವಹಿಸಲಿದೆ. ಬೆಳಿಗ್ಗೆ ಅಣಕು ಮತದಾನ ಪ್ರಕ್ರಿಯೆಯಿಂದ ಸಂಜೆ ಮತದಾನ ಪ್ರಕ್ರಿಯೆ ಮುಗಿಯುವವರೆಗೆ ಮತಗಟ್ಟೆಗಳಲ್ಲಿನ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT