ಸಂಗ್ರಹ ಚಿತ್ರ 
ರಾಜ್ಯ

ಕಾರವಾರ: ಕಾಳಿ ನದಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಅಹ್ಮದ್ ಕುಟುಂಬದ 6 ಮಂದಿ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಸಂಭವಿಸಿದೆ.

ಕಾರವಾರ(ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಸಂಭವಿಸಿದೆ.

ಮೃತರನ್ನು 40 ವರ್ಷದ ನಜೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ‌ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಎಂದು ಗುರುತಿಸಲಾಗಿದೆ.

ಪ್ರವಾಸಕ್ಕೆ ತೆರಳಿದ್ದಾಗ ಅಹ್ಮದ್ ಕುಟುಂಬ ಊಟ ಮಾಡಿ ಕಾಳಿ ನದಿ ದಡದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿದೆ. ಆಗ ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಪ್ರವಾಸಕ್ಕೆಂದು ಒಟ್ಟು 8 ಮಂದಿ ತಂಡ ತೆರಳಿತ್ತು. ಆ ಪೈಕಿ ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎನ್ನಲಾಗುತ್ತಿದೆ. ಸದ್ಯ ಕಾಳಿ ನದಿಯಿಂದ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

70ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ, ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ

ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿಯರ ಜೊತೆಗೆ ತ್ರಿಮೂರ್ತಿಗಳಿಗೆ ಪೂಜೆ: ಶ್ರೀ ಚಕ್ರರೂಪದಲ್ಲಿ ಆದಿಶಕ್ತಿ; ಗ್ರಹಣ ಸಮಯದಲ್ಲೂ ಮುಚ್ಚದ ಶಕ್ತಿ ಪೀಠವಿದು!

70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಎಲ್ಲೆಡೆ ಹರಡಿದ ಕನ್ನಡದ ಕಂಪು, ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ

ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಆಚರಣೆ: ಜನತೆಗೆ CM-DCM ಸೇರಿ ಗಣ್ಯರಿಂದ ಶುಭಾಶಯ

SCROLL FOR NEXT