ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಳಗಾವಿ: ಧಾರ್ಮಿಕ ಮತಾಂತರಕ್ಕೆ ಯತ್ನ; ದಂಪತಿ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲು

28 ವರ್ಷದ ಮಹಿಳೆಯ ಖಾಸಗಿ ಫೋಟೊಗಳನ್ನು ಬಳಸಿ ಬ್ಲಾಕ್‌ಮೇಲ್ ಮಾಡುವ ಮೂಲಕ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ದಂಪತಿ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: 28 ವರ್ಷದ ಮಹಿಳೆಯ ಖಾಸಗಿ ಫೋಟೊಗಳನ್ನು ಬಳಸಿ ಬ್ಲಾಕ್‌ಮೇಲ್ ಮಾಡುವ ಮೂಲಕ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ದಂಪತಿ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ರಫೀಕ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತೆಯೊಂದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದನುು. ನಂತರ ಆಕೆಯ ಖಾಸಗಿ ಫೋಟೊಗಳನ್ನು ತೋರಿಸಿ ಇಸ್ಲಾಂಗೆ ಮತಾಂತರವಾಗುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಮತ್ತು ಆತನ ಪತ್ನಿ ಹಾಗೂ ಸಂತ್ರಸ್ತೆ ಮೂವರೂ ಒಟ್ಟಿಗೆ ವಾಸಿಸುತ್ತಿದ್ದರು. ಪತ್ನಿಯ ಎದುರಿಗೆ ರಫೀಕ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಮತ್ತು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ. ಆಕೆಯ ದೂರಿನ ಪ್ರಕಾರ, ಅವರು ಕುಂಕುಮದ ಬದಲಿಗೆ ಬುರ್ಖಾ ಧರಿಸುವಂತೆ ಕೇಳುತ್ತಿದ್ದರು.

2024ರ ಏಪ್ರಿಲ್‌ನಲ್ಲಿ, ಅವರು ಮಹಿಳೆಯನ್ನು ದಿನಕ್ಕೆ ಐದು ಬಾರಿ ನಮಾಜ್ ಮಾಡಲು, ಬುರ್ಖಾ ಧರಿಸಲು ಮತ್ತು ಕುಂಕುಮ ಧರಿಸದಂತೆ ಒತ್ತಾಯಿಸಿದರು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಭೀಮಾಶಂಕರ್ ಎಸ್ ಗುಳೇದ್ ಹೇಳಿದ್ದಾರೆ.

ಆರೋಪಿ ರಫೀಕ್ ಸಂತ್ರಸ್ತೆಯು ತನ್ನ ಪತಿಗೆ ವಿಚ್ಛೇದನ ನೀಡಿ, ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತಮ್ಮೊಂದಿಗೆ ವಾಸಿಸುವಂತೆ ಕೇಳಿಕೊಂಡಿದ್ದಾನೆ. ಇಲ್ಲದಿದ್ದರೆ, ಆಕೆಯ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಏಳು ಜನರ ವಿರುದ್ಧ ಸವದತ್ತಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!

Pakistan: 17 ವರ್ಷ ಜೈಲು ಶಿಕ್ಷೆ ಹಿನ್ನೆಲೆ, ದೇಶಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಸಜ್ಜಾಗಿ, ಇಮ್ರಾನ್ ಖಾನ್ ಕರೆ!

ಬೆಂಗಳೂರು: ರಾಷ್ಟ್ರೀಯ 'ಪಲ್ಸ್ ಪೋಲಿಯೊ ಲಸಿಕಾ' ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

SCROLL FOR NEXT