ಬಿ ವೈ ವಿಜಯೇಂದ್ರ 
ರಾಜ್ಯ

ಯಾದಗಿರಿ ದಲಿತ ಯುವಕನ ಹತ್ಯೆ: ಈ ರಾಜ್ಯದಲ್ಲಿ ಯಾರು ನೆಮ್ಮದಿಯಾಗಿ ಬದುಕಬೇಕು? ವಿಜಯೇಂದ್ರ ಕಿಡಿ

ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಘಟನೆ ನಡೆದಿದೆ.

ಯಾದಗಿರಿ: ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಘಟನೆ ನಡೆದಿದೆ. ರಾಕೇಶ್ (22) ಮೃತ ದುರ್ದೈವಿ.

ಭಾನುವಾರ ರಾತ್ರಿ ರಾಕೇಶ್‌ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್‌ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್‌ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.

ಸ್ವಲ್ಪ ಸಮಯದ ನಂತರ ರಾಕೇಶ್‌ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್‌ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.

ಇನ್ನೂ ಯಾದಗಿರಿ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ರಾಜ್ಯದಲ್ಲಿ ಯಾರು ನೆಮ್ಮದಿಯಾಗಿ ಬದುಕಬೇಕು

ಅಮಾಯಕ ಹೆಣ್ಣು ಮಕ್ಕಳ ಮಾನ - ಪ್ರಾಣ ಹರಣವಾಗುತ್ತಿದೆ, ಸ್ತ್ರೀಕುಲ ಪೀಡಕರ ಅಟ್ಟಹಾಸ ಎಲ್ಲೆ ಮೀರಿದೆ. ದೈವ ಸ್ಮರಣೆ ಮಾಡುವವರ ಮೇಲೆ ಹಲ್ಲೆ ನಡೆಯುತ್ತಿದೆ. ಇದೀಗ ಯಾದಗಿರಿಯಲ್ಲಿ ದಲಿತ ಯುವಕ ರಾಕೇಶ್ ನನ್ನು ಫಯಾಜ್ ಎಂಬ ಕೊಲೆಗಡುಕ ಕೊಲೆಗೈದಿದ್ದಾನೆ. ಪೊಲೀಸ್ ವ್ಯವಸ್ಥೆಯನ್ನು ನಿಷ್ಕ್ರೀಯ ಗೊಳಿಸಿರುವ ಸರ್ಕಾರದ ನೆರಳಲ್ಲಿ ಜನರ ರಕ್ಷಣೆಗೆ ಅವಕಾಶ ಎಲ್ಲಿದೆ?

ಮಹಿಳೆಯರಿಗೆ ರಕ್ಷಣೆ ಇಲ್ಲದ, ದಲಿತರಿಗೆ ಭದ್ರತೆ ಕೊಡದ, ಹಿಂದುಳಿದವರಿಗೆ ನಿರಾತಂಕ ಒದಗಿಸಲಾಗದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕುವೆಂಪು ಅವರು ಕಂಡ “ಸರ್ವ ಜನಾಂಗದ ಶಾಂತಿಯ ತೋಟ" ದ ಕರ್ನಾಟಕವನ್ನು ಕರಾಳ ಕರ್ನಾಟಕವನ್ನಾಗಿಸಿ 'ನಿರ್ದಿಷ್ಟ ಕೋಮಿಗೆ ಮಾತ್ರ ಸುರಕ್ಷತೆಯ ತಾಣ ಮಾಡಲು ಹೊರಟಿದೆ ಎಂದು ಹರಿಹಾಯ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT