ದ್ರೌಪದಮ್ಮ ಕರಗ ಮಹೋತ್ಸವ (ಸಾಂದರ್ಭಿಕ ಚಿತ್ರ) 
ರಾಜ್ಯ

ಬೆಂಗಳೂರಿನಲ್ಲಿಂದು ಐತಿಹಾಸಿಕ ಕರಗ ಮಹೋತ್ಸವ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ!

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಆರಂಭವಾಗಿದ್ದು, ಮಂಗಳವಾರ ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಎ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ. ಈ ಸಂಭ್ರಮದ ದಿನ ಭಾರಿ ಜನ ಸೇರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಆರಂಭವಾಗಿದ್ದು, ಮಂಗಳವಾರ ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಎ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ. ಈ ಸಂಭ್ರಮದ ದಿನ ಭಾರಿ ಜನ ಸೇರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಏಪ್ರಿಲ್ 23 ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 24 ಬೆಳಗ್ಗೆ 10 ಗಂಟೆಯವರೆಗೆ ಬೆಂಗಳೂರು ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಆಯುಕ್ತ ದಯಾನಂದ ಆದೇಶ ನೀಡಿದ್ದಾರೆ.

ಸಿಟಿ ಮಾರ್ಕೆಟ್, ಕಲಾಸಿಪಾಳ್ಯಂ, ಕಾಟನ್‌ಪೇಟೆ ಮತ್ತು ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ನಿರ್ಬಂಧ ಜಾರಿಯಲ್ಲಿರಲಿದೆ.

ಬಾರ್‌ಗಳು, ವೈನ್ ಸ್ಟೋರ್‌ಗಳು, ಪಬ್‌ಗಳು ಮತ್ತು ಮದ್ಯ ಮಾರಾಟ ಮಾಡುವ ಇತರ ಸ್ಥಳಗಳಲ್ಲಿ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ. ಸಿಎಲ್ -4 (ಕ್ಲಬ್‌ಗಳು) ಮತ್ತು ಸಿಎಲ್ -6 ಎ ಪರವಾನಗಿಗಳನ್ನು ಹೊಂದಿರುವ ಸ್ಟಾರ್ ಹೋಟೆಲ್​ಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವದ ಮೆರವಣಿಗೆ ಇಂದು ರಾತ್ರಿಯಿಂದ ಆರಂಭವಾಗಲಿದೆ. ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೂ ಕರಗ ಮಹೋತ್ಸವದ ಮೆರವಣಿಗೆ ಸಾಗಲಿದೆ. ಅದ್ಧೂರಿಯಾಗಿ ಕರಗ ಆಚರಣೆಗೆ ಕರಗ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆಯಿಂದ ಕರಗದ ಶಾಸ್ತ್ರಗಳು ಆರಂಭವಾಗಿ ಮಧ್ಯರಾತ್ರಿವರೆಗೂ ನಡೆಯಲಿದ್ದು, ಶಾಸ್ತ್ರಗಳು ಮುಗಿದ ನಂತರ ಮಧ್ಯರಾತ್ರಿ 2 ಗಂಟೆಗೆ ಅಧಿಕೃತವಾಗಿ ಕರಗ ಶಕ್ತ್ಯೋತ್ಸವ ಆರಂಭವಾಗಲಿದೆ.

ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಲಿದೆ. ನಂತರ ಕೆಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ಆಗಮಿಸಲಿದೆ. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಗಲಿದೆ. ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್ ಪೇಟೆ ಮೂಲಕ ಬೆಳಗ್ಗೆ 6 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಲಿದೆ. ಹೀಗಾಗಿ ಈ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT