ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಬೈಲ್ ಮೂಲಕ ಮಾತನಾಡಿದ ನಿರಂಜನ ಹಿರೇಮಠ 
ರಾಜ್ಯ

ನೇಹಾ ಹಿರೇಮಠ ನಿವಾಸಕ್ಕೆ ಸಚಿವ HK Patil ಭೇಟಿ, ದೂರವಾಣಿ ಮೂಲಕ ತಂದೆ ನಿರಂಜನ್ ಹಿರೇಮಠಗೆ ಸಿಎಂ ಸಾಂತ್ವನ

ಚುನಾವಣಾ ಪ್ರಚಾರದ ಒತ್ತಡದ ಮಧ್ಯೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಹಾ ತಂದೆ ನಿರಂಜನ್​ ಹಿರೇಮಠ ಅವರೊಂದಿಗೆ ಇಂದು ದೂರವಾಣಿ ಮೂಲಕ ಮಾತನಾಡಿ, ವೆರಿ ಸಾರಿ, ನಾವು ನಿಮ್ಮೊಂದಿಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ್ ಪುತ್ರಿ, ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಭಾರೀ ಸುದ್ದಿ ಮಾಡಿ ವಿರೋಧ ಪಕ್ಷಗಳ ಟೀಕೆ, ಒತ್ತಡದ ನಡುವೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ಚುನಾವಣಾ ಪ್ರಚಾರದ ಒತ್ತಡದ ಮಧ್ಯೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಹಾ ತಂದೆ ನಿರಂಜನ್​ ಹಿರೇಮಠ ಅವರೊಂದಿಗೆ ಇಂದು ದೂರವಾಣಿ ಮೂಲಕ ಮಾತನಾಡಿ, ವೆರಿ ಸಾರಿ, ನಾವು ನಿಮ್ಮೊಂದಿಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಹತ್ಯೆ ಪ್ರಕರಣವನ್ನು ತಮ್ಮದೇ ಪಕ್ಷದ ಸರ್ಕಾರವಿದ್ದರೂ ಸರಿಯಾಗಿ ಮುಂದುವರಿಸಿಕೊಂಡು ಹೋಗುತ್ತಿಲ್ಲ ಎಂದು ನಿರಂಜನ್ ಹಿರೇಮಠ್ ಈ ಮೊದಲು ಅಸಮಾಧಾನ ವ್ಯಕ್ತಪಡಿಸಿದ್ದರು. ಹಿರೇಮಠ ಮನೆಗೆ ಸಿಎಂ ಮತ್ತು ಡಿಸಿಎಂ ಭೇಟಿ ನೀಡದೆ ಇದ್ದದ್ದು ಕೂಡ ಹಲವರ ಟೀಕೆಗೆ ಗುರಿಯಾಗಿತ್ತು.

ನಿರಂಜನ ಹಿರೇಮಠ ಅವರ ನಿವಾಸಕ್ಕೆ ಇಂದು ಸಚಿವ ಹೆಚ್​.ಕೆ ಪಾಟೀಲ್ ಭೇಟಿ ನೀಡಿ, ಸಾಂತ್ವನ ಹೇಳಿದರು. ಈ ವೇಳೆ ಹೆಚ್​​.ಕೆ.ಪಾಟೀಲ್​ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿದರು. ಆಗ ಸಿಎಂ ಸಿದ್ದರಾಮಯ್ಯ, ನೇಹಾ ತಂದೆ ನಿರಂಜನ ಹಿರೇಮಠ ಜೊತೆ ಮಾತನಾಡಿ, ನಾವು ನಿಮ್ಮ ಜೊತೆ ಇರುತ್ತೇವೆ, ವೆರಿ ಸಾರಿ ಎಂದರು. ಪ್ರಕರಣವನ್ನು ಸಿಐಡಿಗೆ ನೀಡಿದ್ದಕ್ಕೆ ನಿಮಗೆ ಧನ್ಯವಾದ ಎಂದು ನಿರಂಜನ ಹಿರೇಮಠ ಸಿಎಂಗೆ ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್​​.ಕೆ.ಪಾಟೀಲ್, ಅನಿವಾರ್ಯ ಕಾರಣಗಳಿಂದ ಇಂದು ಸಿಎಂ ಬರುವುದಕ್ಕೆ ಆಗಿಲ್ಲ. ನೇಹಾ ತಂದೆ ನಿರಂಜನ ಜತೆ ಸಿಎಂ ಮಾತಾಡಿ ಸಾಂತ್ವನ ಹೇಳಿದ್ದಾರೆ. ನಿರಂಜನ ಹಿರೇಮಠಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ. ನೇಹಾ ಸಾವಿಗೆ ನ್ಯಾಯ ಸಿಗಲಿದೆ. ಪ್ರಕರಣದ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡುವಂತೆ ಹೈಕೋರ್ಟ್​ಗೆ ಪತ್ರ ಬರೆಯುತ್ತೇವೆ. ತಪ್ಪಿಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದರು.

ವಿಶೇಷ ನ್ಯಾಯಾಲಯಕ್ಕೆ ನೇಹಾ ಹೆಸರು: ಪ್ರಕರಣ ಸಂಬಂಧ ಸರ್ಕಾರ ತಕ್ಷಣ ಸ್ಪಂದಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಣಾಯಕ್ಕೆ ಧನ್ಯವಾದ ಹೇಳುತ್ತೇನೆ. ವಿಶೇಷ ನ್ಯಾಯಾಲಯಕ್ಕೆ ನೇಹಾ ಹಿರೇಮಠ ಅಂತ ಹೆಸರಿಡಬೇಕು, ಕಾಯ್ದೆಗೂ ಅವರ ಹೆಸರಿಡಿ. ನೇಹಾಳ ಸಾವಿಗೆ ನ್ಯಾಯ ಸಿಗಬೇಕು ಎಂದು ನಿರಂಜನ ಹಿರೇಮಠ ಆಗ್ರಹಿಸಿದರು.

ತಪ್ಪಾಗಿ ಮಾತನಾಡಿದ್ದರೆ ಕ್ಷಮಿಸಿ: ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದೇವೆ. ಕಾನೂನಿನ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬೆನ್ನ ಹಿಂದೆ ಸರ್ಕಾರ ಕೆಲಸ ಮಾಡಿದೆ. ಸಿಎಂ ಸಾಂತ್ವನ ಹೇಳಲು ಬರುವುದಾಗಿ ಹೇಳಿದ್ದಾರೆ. ನಾನು ತಪ್ಪಾಗಿ ಮಾತನಾಡಿದ್ದರೆ ಕ್ಷಮಿಸಿ. ಪೊಲೀಸ್ ಆಯುಕ್ತರ ಬಗ್ಗೆ ದುಃಖದಲ್ಲಿ ತಪ್ಪಾಗಿ ಮಾತನಾಡಿದ್ದೇನೆ. ನನ್ನನ್ನು ಎಲ್ಲರೂ ಕ್ಷಮಿಸಿ. ಸ್ಥಳೀಯ ಶಾಸಕರು, ಜಿಲ್ಲಾಧ್ಯಕ್ಷರು ಎಲ್ಲ ಮುಖಂಡರು ನಮ್ಮ ಪರ ನಿಂತಿದ್ದಾರೆ ಎಂದು ನಿರಂಜನ ಹಿರೇಮಠ ಹೇಳಿದರು.

ಈಗ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ. ಅವರು ಹೇಗೆ ತನಿಖೆ ಮಾಡುತ್ತಾರೆ ಮೊದಲು ಮಾಡಲಿ. ಪೊಲೀಸ್ ಇಲಾಖೆ ಸರಿಯಾಗಿ ತನಿಖೆ ಮಾಡುತ್ತಿಲ್ಲ ಅಂತ ಆರೋಪ ಮಾಡಿದ್ದೆ. ನಿಷ್ಪಕ್ಷವಾಗಿ ತನಿಖೆ ನಡೆದಿರುವುದು ನನಗೆ ಗೊತ್ತಾಗಿದೆ. ಮಾಹಿತಿ ಕೊರತೆಯಿಂದ ಮಾತನಾಡಿದ್ದೇನೆ. ಪೊಲೀಸ್ ಇಲಾಖೆ ಬಳಿಯೂ ಕ್ಷಮೆ ಕೇಳುತ್ತೇನೆ. ಆತಂಕದಲ್ಲಿ ನಾನು ಕೆಲ ಹೇಳಿಕೆ ನೀಡಿದೆ. ಕಾಣದ ಕೈ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ನಾಯಕರೆಲ್ಲರಿಗೂ ಧನ್ಯವಾದ ಹೇಳುತ್ತೇನೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT