ತುಷಾರ್ ಗಿರಿನಾಥ್  ತುಷಾರ್ ಗಿರಿನಾಥ್
ರಾಜ್ಯ

IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮತದಾರರ ಮೊಬೈಲ್‌ಗಳಿಗೆ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಹಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮತದಾರರ ಮೊಬೈಲ್‌ಗಳಿಗೆ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಹಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು.

ಲೋಕಸಭಾ ಚುನಾವಣೆ ಸಂಬಂಧ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗಾಗಲೇ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆಯಾ ವಲಯಗಳಲ್ಲಿ ತಳ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಇದೀಗ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸುವವರ ಮಾಹಿತಿಯು ಪಾಲಿಕೆಯ ಕಂದಾಯ ವಿಭಾಗದಲ್ಲಿ ಲಭ್ಯವಿದ್ದು, ಅದರನುಸಾರ ಎಲ್ಲರಿಗೂ ಐವಿಆರ್‌ಎಸ್ ಹಾಗೂ ಬೆಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಗಿಸಲಾಗವುದೆಂದು ತಿಳಿಸಿದರು.

ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರು ಸಕ್ಷಮ್ ತಂತ್ರಾಂಶದ ಮೂಲಕ ಸಾರಿಗೆ ವ್ಯವಸ್ಥೆ ಅವಶ್ಯಕತೆ ಇರುವವರು ಮುಂಚಿತವಾಗಿಯೇ ಕಾಯ್ದಿರಿಸಿಕೊಳ್ಳುವ ಸಲುವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅದರಂತೆ, ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರು ಸಕ್ಷಮ್ ತಂತ್ರಾಂಶದಲ್ಲಿ ಏಪ್ರಿಲ್ 24ನೇ ಸಂಜೆ 5 ಗಂಟೆಯವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಸಂಬಂಧಪಟ್ಟ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಚುನಾವಣಾಧಿಕಾರಿಗಳು ಅದಕ್ಕೆ ಸೂಕ್ತ ಕ್ರಮ ವಹಿಸಲಿದ್ದಾರೆ ಎಂದರು.

ಸಕ್ಷಮ್ ತಂತ್ರಾಂಶದಲ್ಲಿ ದಿವ್ಯಾಂಗರಿಗೆ(PwDs) ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅಮೂಲ್ಯವಾದ ಸಾಧನವಾಗಿದ್ದು, ದಿವ್ಯಾಂಗರಿಗೆ ನೋಂದಾಯಿಸಲು, ಅವರ ಮತಗಟ್ಟೆಯನ್ನು ಹುಡುಕಲು ಮತ್ತು ಮತ ಚಲಾಯಿಸಲು ಸುಲಭವಾಗುವಂತೆ ಮಾಡಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್