ತುಷಾರ್ ಗಿರಿನಾಥ್  ತುಷಾರ್ ಗಿರಿನಾಥ್
ರಾಜ್ಯ

IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮತದಾರರ ಮೊಬೈಲ್‌ಗಳಿಗೆ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಹಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮತದಾರರ ಮೊಬೈಲ್‌ಗಳಿಗೆ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಹಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು.

ಲೋಕಸಭಾ ಚುನಾವಣೆ ಸಂಬಂಧ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗಾಗಲೇ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆಯಾ ವಲಯಗಳಲ್ಲಿ ತಳ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಇದೀಗ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸುವವರ ಮಾಹಿತಿಯು ಪಾಲಿಕೆಯ ಕಂದಾಯ ವಿಭಾಗದಲ್ಲಿ ಲಭ್ಯವಿದ್ದು, ಅದರನುಸಾರ ಎಲ್ಲರಿಗೂ ಐವಿಆರ್‌ಎಸ್ ಹಾಗೂ ಬೆಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಗಿಸಲಾಗವುದೆಂದು ತಿಳಿಸಿದರು.

ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರು ಸಕ್ಷಮ್ ತಂತ್ರಾಂಶದ ಮೂಲಕ ಸಾರಿಗೆ ವ್ಯವಸ್ಥೆ ಅವಶ್ಯಕತೆ ಇರುವವರು ಮುಂಚಿತವಾಗಿಯೇ ಕಾಯ್ದಿರಿಸಿಕೊಳ್ಳುವ ಸಲುವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅದರಂತೆ, ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರು ಸಕ್ಷಮ್ ತಂತ್ರಾಂಶದಲ್ಲಿ ಏಪ್ರಿಲ್ 24ನೇ ಸಂಜೆ 5 ಗಂಟೆಯವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಸಂಬಂಧಪಟ್ಟ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಚುನಾವಣಾಧಿಕಾರಿಗಳು ಅದಕ್ಕೆ ಸೂಕ್ತ ಕ್ರಮ ವಹಿಸಲಿದ್ದಾರೆ ಎಂದರು.

ಸಕ್ಷಮ್ ತಂತ್ರಾಂಶದಲ್ಲಿ ದಿವ್ಯಾಂಗರಿಗೆ(PwDs) ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅಮೂಲ್ಯವಾದ ಸಾಧನವಾಗಿದ್ದು, ದಿವ್ಯಾಂಗರಿಗೆ ನೋಂದಾಯಿಸಲು, ಅವರ ಮತಗಟ್ಟೆಯನ್ನು ಹುಡುಕಲು ಮತ್ತು ಮತ ಚಲಾಯಿಸಲು ಸುಲಭವಾಗುವಂತೆ ಮಾಡಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT