ರಾಜ್ಯ

ಲೋಕಸಭಾ ಚುನಾವಣೆ: ಮತದಾನ ಕುರಿತು ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ

ಲೋಕಸಭಾ ಚುನಾವಣೆ-2024 ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಚುನಾವಣಾ ಆಯೋಗ ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ಯನ್ನು ಆಯೋಜಿಸಲಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆ-2024 ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಚುನಾವಣಾ ಆಯೋಗ ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ಯನ್ನು ಆಯೋಜಿಸಲಾಗಿದೆ.

ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾ ಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹ ಯೋಗ್ಯ ಛಾಯಾಚಿತ್ರಗಳನ್ನು ಭಾರತ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ , ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್, ಮನೆವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : mediacellceokarnataka@gmail.com ಸಲ್ಲಿಸುವುದು. ಫೋಟೊಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 15-05-2024 ರಂದು ಬುಧವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ.

ಬಹುಮಾನಗಳ ವಿವರ: ಮೊತ್ತ

1 ಪ್ರಥಮ ಬಹುಮಾನ 25,000/-

2 ದ್ವಿತೀಯ ಬಹುಮಾನ 15,000/-

3 ತೃತೀಯ ಬಹುಮಾನ 10,000/-

4 ಸಮಾಧಾನಕರ ಬಹುಮಾನ 6,000/-

5 ವಿಶೇಷ ಬಹುಮಾನ 5,000/-

ಒಟ್ಟು 61,000/-

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!