ನೇಹಾ, ಫಯಾಜ್ 
ರಾಜ್ಯ

ಫಯಾಜ್ ಜೊತೆಗಿನ ನೇಹಾ ಫೋಟೋ: ರಾಜ್ಯ ಸರ್ಕಾರವೇ ಲೀಕ್ ಮಾಡಿದೆ- ಪ್ರಲ್ಹಾದ ಜೋಶಿ ಆರೋಪ

ಕಳೆದ ಗುರುವಾರ ನಡೆದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿ: ಕಳೆದ ಗುರುವಾರ ನಡೆದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಆರೋಪಿಯ ಮೊಬೈಲ್‌ನಿಂದ ನೇಹಾ ಹಿರೇಮಠ ಮತ್ತು ಫಯಾಜ್ ಕೊಂಡಿನಕೊಪ್ಪ ಅವರ ಫೋಟೋಗಳನ್ನು ಕರ್ನಾಟಕ ಸರ್ಕಾರವೇ ಲೀಕ್ ಮಾಡಿದೆ ಎಂದು ಅವರು ಹೇಳಿದ್ದಾರೆ.

ಫಯಾಜ್ ಕೊಂಡಿನಕೊಪ್ಪದಿಂದ ನೇಹಾ ಹಿರೇಮಠ ಕೊಲೆಯಾದ ನಂತರ, ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇನ್ಸಾಟಾಗ್ರಾಮ್ ಖಾತೆಯೊಂದರಲ್ಲಿ

ನೇಹಾ ಹಿರೇಮಠ ಮತ್ತು ಫಯಾಜ್ ಕೊಂಡಿನಕೊಪ್ಪ ಲವ್ ಮಾಡುತ್ತಿದ್ದರು ಎನ್ನಲಾಗಿದೆ. ಮೃತ ಯುವತಿಯ ಕುಟುಂಬಸ್ಥರು ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಸಮರ್ಥಿಸಿಕೊಂಡಿದ್ದು, ಫೋಟೋಗಳು ಇರುವ ಸಾಮಾಜಿಕ ಜಾಲತಾಣ ಖಾತೆಯ ಬಗ್ಗೆ ದೂರು ದಾಖಲಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಜೈಲಿನಲ್ಲಿದ್ದಾಗ ಆರೋಪಿಯ ಮೊಬೈಲ್‌ನಿಂದ ಫೋಟೋಗಳನ್ನು ಸೋರಿಕೆ ಮಾಡಿದವರು ಯಾರು ಎಂದು ಪ್ರಶ್ನಿಸಿದರು ಮತ್ತು ರಾಜ್ಯ ಸರ್ಕಾರ ಇದನ್ನು ಮಾಡುತ್ತಿದೆ ಎಂದು ಆರೋಪಿಸಿದರು.

ನೇಹಾ ಹಿರೇಮಠ ಹತ್ಯೆ ಬಳಿಕ ಮತ್ತೊಂದು ಯುವತಿ ಮೇಲೆ ಹಲ್ಲೆ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿ ಮತಾಂತರಗೊಳ್ಳಲು ಒಪ್ಪದಿದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ. ‘ಹುಬ್ಬಳ್ಳಿ ಭಾಗದಲ್ಲಿ ಹಿಂದೂ ಸಂಘಟನೆಗಳು, ಸಮುದಾಯಗಳು ಬಲಿಷ್ಠವಾಗಿದ್ದು, ಇಲ್ಲೇ ಹೀಗಾದರೆ ಬೇರೆ ಕಡೆ ಏನಾಗಿದೆ’ ಎಂದು ಅವರು ಪ್ರಶ್ನಿಸಿದರು.

ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿರುವವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು. ಇಲ್ಲದಿದ್ದಲ್ಲಿ ಹಿಂದೂ ಧರ್ಮ, ಸಂಸ್ಕೃತಿಯನ್ನು ನಮ್ಮ ಮನೆಗಳಲ್ಲಿ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಜೋಶಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT