ಸಿದ್ದರಾಮಯ್ಯ-ನಿರಂಜನ ಹಿರೇಮಠ PTI
ರಾಜ್ಯ

ಮೃತ ನೇಹಾ ಹಿರೇಮಠ್ ಮನೆಗೆ ಭೇಟಿ: ಪೋಷಕರಿಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ!

ಫಯಾಜ್ ನಿಂದ ಭೀಕರವಾಗಿ ಹತ್ಯೆಗೀಡಾಗಿದ್ದ ಮೃತ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.

ಧಾರವಾಡ: ಫಯಾಜ್ ನಿಂದ ಭೀಕರವಾಗಿ ಹತ್ಯೆಗೀಡಾಗಿದ್ದ ಮೃತ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಘಟನೆ ದುರದೃಷ್ಟಕರ. ನೇಹಾ ಹಿರೇಮಠ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಪ್ರಕರಣವನ್ನು ವಿಸ್ತೃತ ತನಿಖೆಗಾಗಿ ಸಿಐಡಿಗೆ ವಹಿಸಿದ್ದೇನೆ ಎಂದರು. ಅದರ ಜೊತೆಗೆ ನಾವು ಈ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ರಚಿಸುತ್ತೇವೆ ಎಂದರು.

ಇನ್ನು ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸಿಬಿಐಗೆ ಕೇಸ್ ಕೊಟ್ಟಿದೆಯೇ? ಒಂದೇ ಒಂದು ಪ್ರಕರಣವನ್ನು ನನಗೆ ತೋರಿಸಿ, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲು ನಿರಾಕರಿಸಿದ ಅವರು, ನೇಹಾ ಹಿರೇಮಠ ಹತ್ಯೆ ಹಿನ್ನೆಲೆ ಕುಟುಂಬಕ್ಕೆ ಸಾಂತ್ವನ ಹೇಳಲು ಮಾತ್ರ ಧಾರವಾಡಕ್ಕೆ ಬಂದಿದ್ದೇನೆ. ನಾವು ಹಿರೇಮಠ ಜೊತೆ ಇರುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ನೇಹಾ ತಂದೆ ನಿರಂಜನ ಹಿರೇಮಠ ಮಾತನಾಡಿ, ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಿ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ಆದೇಶಿಸಿದ ಸಿದ್ದರಾಮಯ್ಯ ಮತ್ತು ರಾಜ್ಯ ಕಾನೂನು ಸಚಿವ ಎಚ್‌ಕೆ ಪಾಟೀಲ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಪ್ರಕರಣದಲ್ಲಿ 90 ದಿನಗಳಲ್ಲಿ ನ್ಯಾಯ ದೊರಕಿಸಿಕೊಡಲಾಗುವುದು ಅಥವಾ ವಿಳಂಬವಾದರೆ 120 ದಿನಗಳನ್ನು ಮೀರುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಭರವಸೆ ನೀಡಿದ್ದಾರೆ. ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹಿರೇಮಠ್ ಹೇಳಿದರು.

ಹುಬ್ಬಳ್ಳಿ-ಧಾರವಾಡ ಪುರಸಭೆಯ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರ ಪುತ್ರಿ 23 ವರ್ಷದ ನೇಹಾ ಹಿರೇಮಠಳನ್ನು ಏಪ್ರಿಲ್ 18ರಂದು ಬಿವಿಬಿ ಕಾಲೇಜಿನ ಆವರಣದಲ್ಲಿ ಆಕೆಯ ಮಾಜಿ ಸಹಪಾಠಿ ಫಯಾಜ್ ಎಂಬಾತ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದನು. ಫಯಾಜ್ ನೇಹಾಗೆ ಹಲವು ಬಾರಿ ಇರಿದ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದವು. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT