ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದಿನಿಂದ ಐದು ದಿನ ಹೀಟ್ ವೇವ್ ಅಲರ್ಟ್

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದೆ.

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸೂಚಿಸಿದೆ.

ಕೊಂಕಣ ಮತ್ತು ಗೋವಾ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಪುದುಚೇರಿ, ತಮಿಳುನಾಡು ಮತ್ತು ಕೇರಳ ಸೇರಿದಂತೆ ಭಾರತದ ಹೆಚ್ಚಿನ ಭಾಗಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳೊಂದಿಗೆ ಬಿಸಿ ಮತ್ತು ಆರ್ದ್ರ ವಾತಾವರಣದ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯು ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಅನ್ನು ಘೋಷಿಸಿದೆ. ಸುಡುವ ಸೂರ್ಯನಿಗೆ ದೀರ್ಘಕಾಲ ತೆರೆದುಕೊಳ್ಳುವವರಲ್ಲಿ ಶಾಖ-ಸಂಬಂಧಿತ ಅನಾರೋಗ್ಯದ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಆರೋಗ್ಯ ಕಾಳಜಿ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ.

ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಿದಾಗ ಅಥವಾ ನಿರ್ದಿಷ್ಟ ಜಿಲ್ಲೆಯ ತಾಪಮಾನವು ಸಾಮಾನ್ಯಕ್ಕಿಂತ 4.5 ಡಿಗ್ರಿ ಸೆಲ್ಸಿಯಸ್ ಹೆಚ್ಚಾದಾಗ ಹೀಟ್ ವೇವ್ ಅಲರ್ಟ್ ನೀಡಲಾಗುವುದು ಎಂದು ಐಎಂಡಿ ಬೆಂಗಳೂರು ಪ್ರಭಾರಿ ನಿರ್ದೇಶಕ ಎನ್ ಪುವಿಯರಸನ್ ಅವರು ತಿಳಿಸಿದ್ದಾರೆ.

ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಪುವಿಯರಸನ್ ಹೇಳಿದ್ದು, ಒಟ್ಟಾರೆಯಾಗಿ, ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ