ಸಾಂದರ್ಭಿಕ ಚಿತ್ರ 
ರಾಜ್ಯ

ಏಪ್ರಿಲ್ 29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್​ಸೈಟ್ https://kseab.karnatala.gov.in ನಲ್ಲಿ ಪಡೆಯಬಹುದಾಗಿದೆ.

ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್​ಲೈನ್​ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 32,848 ವಿದ್ಯಾರ್ಥಿಗಳು ಫಲಿತಾಂಶವನ್ನು ಉನ್ನತೀಕರಿಸಿಕೊಳ್ಳಲು ಪರೀಕ್ಷೆ ತೆಗೆದುಕೊಂಡಿದ್ದು, 27,092 ವಿದ್ಯಾರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ, ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳ ಸಂಖ್ಯೆ 89,221 ಆಗಿದ್ದು, 139 ವಿದ್ಯಾರ್ಥಿಗಳು ಶೇ.75 ರಷ್ಟು ಹಾಜರಾತಿ ಇಲ್ಲದೇ 17 ವರ್ಷ ತುಂಬಿದ ಖಾಸಗಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದೆ.

ಒಟ್ಟು 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಸೇರಿ 1,49,300 ಅಭ್ಯರ್ಥಿಗಳು ಪರೀಕ್ಷೆ 2ಕ್ಕೆ ಹಾಜರಾಗುತ್ತಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT