ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊಬೈಲ್ ಮೂಲಕ ಮಾತನಾಡಿದ ನಿರಂಜನ ಹಿರೇಮಠ online desk
ರಾಜ್ಯ

ಮನೆಯೊಳಗೆ ಚಿತ್ರೀಕರಣ ನಡೆಸಿರುವ ಅಪರಿಚಿತರಿಂದ ನಮ್ಮ ಕುಟುಂಬಕ್ಕೆ ಅಪಾಯದ ಭೀತಿ: ನೇಹಾ ತಂದೆ

ಸಹಪಾಠಿಯಿಂದಲೇ ಹತ್ಯೆಗೀಡಾದ ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹ ಹಿರೇಮಠ ಅವರ ತಂದೆ ತಮ್ಮ ಕುಟುಂಬಕ್ಕೆ ಅಪಾಯದ ಭೀತಿ ಇದೆ ಎಂದು ಹೇಳಿದ್ದಾರೆ.

ಧಾರವಾಡ: ಸಹಪಾಠಿಯಿಂದಲೇ ಹತ್ಯೆಗೀಡಾದ ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹ ಹಿರೇಮಠ ಅವರ ತಂದೆ ತಮ್ಮ ಕುಟುಂಬಕ್ಕೆ ಅಪಾಯದ ಭೀತಿ ಇದೆ ಎಂದು ಹೇಳಿದ್ದಾರೆ.

ಏ.18 ರಂದು ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಹತ್ಯೆಗೀಡಾಗಿದ್ದರು. ಮಗಳ ಅಂತ್ಯಕ್ರಿಯೆಯ ಬಳಿಕ ಮನೆಯಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳನ್ನು ಅಪರಿಚಿತರು ಚಿತ್ರೀಕರಿಸಿದ್ದು, ಈ ಅಪರಿಚಿತರುಗಳಿಂದ ತಮ್ಮ ಕುಟುಂಬಕ್ಕೆ ಅಪಾಯ ಇದೆ ಎಂದು ನಿರಂಜನ ಹಿರೇಮಠ ಆತಂಕ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪುರಸಭೆಯ ಕಾಂಗ್ರೆಸ್ ಕೌನ್ಸಿಲರ್ ಆಗಿರುವ ನಿರಂಜನ ಹಿರೇಮಠ ಅವರು ತಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಘಟನೆ ನಡೆದ 5 ನೇ ದಿನ ನಾವು ಧಾರ್ಮಿಕ ವಿಧಿವಿಧಾನಗಳಲ್ಲಿ ವ್ಯಸ್ತರಾಗಿದ್ದೆವು, ಓರ್ವ ವ್ಯಕ್ತಿ ನಮ್ಮ ಮನೆಗೆ ಬಂದು ಮನೆ ಹಾಗೂ ಕುಟುಂಬ ಸದಸ್ಯರ ವೀಡಿಯೋ ಚಿತ್ರೀಕರಿಸಿದ್ದ ಎಂದು ಹಿರೇಮಠ ಹೇಳಿದ್ದಾರೆ.

ತನ್ನ ಕೊಠಡಿಗಳನ್ನು ಚಿತ್ರೀಕರಿಸುತ್ತಿದ್ದ ವ್ಯಕ್ತಿಯನ್ನು ನೀವು ಯಾರೆಂದು ಕೇಳಿದಾಗ, ಅಪರಿಚಿತರು ಯಾವುದೇ ಸಮರ್ಪಕ ಉತ್ತರ ನೀಡದೆ ಅಲ್ಲಿಂದ ಹೊರಟುಹೋದರು ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.

ನೇಹಾ ಕೊಲೆ ನಡೆಯುವುದಕ್ಕೂ ಮುನ್ನ ಕಳೆದ ಹಲವು ದಿನಗಳಿಂದ ಅಪರಿಚಿತ ವ್ಯಕ್ತಿಯೂ ತಿರುಗಾಡುತ್ತಿದ್ದ ಎಂದು ಸ್ವಾಮಿಯೊಬ್ಬರಿಂದ ತಿಳಿದುಕೊಂಡಿದ್ದೇನೆ ಎಂದು ಹಿರೇಮಠ್ ಹೇಳಿದ್ದಾರೆ. ಮಗಳ ಹತ್ಯೆಯ ಹಿಂದೆ ದೊಡ್ಡ ಸಂಚು ಇದೆ ಎಂದು ಕಾಂಗ್ರೆಸ್‌ ಸದಸ್ಯ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT