ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 
ರಾಜ್ಯ

ಪ್ರಚೋದನೆಗೆ ಒಳಗಾಗದೆ, ಸ್ವಇಚ್ಛೆಯಿಂದ ಮತ ಚಲಾಯಿಸಿ: ತುಷಾರ್ ಗಿರಿನಾಥ್

ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಮತದಾರರು ಯಾವುದೇ ಪ್ರಚೋದನೆಗೆ ಒಳಗಾಗದೆ ಸ್ವಂತ ವಿವೇಚನೆಯಿಂದ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಕರೆ ನೀಡಿದರು.

ಬೆಂಗಳೂರು: ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಮತದಾರರು ಯಾವುದೇ ಪ್ರಚೋದನೆಗೆ ಒಳಗಾಗದೆ ಸ್ವಂತ ವಿವೇಚನೆಯಿಂದ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಕರೆ ನೀಡಿದರು.

ಮಹದೇವಪುರದ ಗುಂಜೂರು ಬಳಿಯ ಕೃಪಾನಿಧಿ ಸಮೂಹ ಸಂಸ್ಥೆಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಮಾಡಬೇಕು, ಆದರೆ, ಗೊಂದಲವಿದೆ ಎನ್ನುವವರು ವೋಟರ್ ಹೆಲ್ಪ್ ಲೈನ್ ಸಾಫ್ಟ್‌ವೇರ್'ನ್ನು ಮೊದಲು ಡೌನ್‌ಲೋಡ್ ಮಾಡಿಕೊಳ್ಳಬೇಕು.

ನಿಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಸಾಫ್ಟ್‌ವೇರ್‌ನಲ್ಲಿ ನಮೂದಿಸಿದರೆ, ನಿಮಗೆ ಎಲ್ಲಾ ಮಾಹಿತಿ ಲಭ್ಯವಾಗುತ್ತದೆ. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದೂ ನೀವು ಮತದಾನ ಮಾಡದೇ ಇರುವುದು ತಪ್ಪಾಗುತ್ತದೆ. ಹೀಗಾಗಿ ಯಾವುದೇ ಪ್ರಚೋದನೆಗಳಿಗೆ ಒಳಗಾಗದೆ ಮತದಾನ ಮಾಡಿ. ನಿಮ್ಮ ಸ್ವಂತ ವಿವೇಚನೆಯಿಂದ ಮತದಾನ ಮಾಡಿ ಎಂದು ಹೇಳಿದರು.

ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣಾ ಮತ್ತು ಪೊಲೀಸ್ ಅಧಿಕಾರಿಗಳು ಎಲ್ಲಾ ಪ್ರದೇಶಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುತ್ತಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT