ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿ ಮನೆಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

ತನ್ನ ಪ್ರಿಯತಮೆ ತನಗೆ ಎಂದಿಗೂ ದೊರಕಲಾರಳು ಎಂದು ಹತಾಶೆಗೊಳಗಾದ ಪ್ರಿಯಕರ, ಆಕೆಯ ಮನೆಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ನಗರದ ಸಂಪಿಗೆಹಳ್ಳಿ ಪೊಲೀಸ್‌ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ತನ್ನ ಪ್ರಿಯತಮೆ ತನಗೆ ಎಂದಿಗೂ ದೊರಕಲಾರಳು ಎಂದು ಹತಾಶೆಗೊಳಗಾದ ಪ್ರಿಯಕರ, ಆಕೆಯ ಮನೆಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ನಗರದ ಸಂಪಿಗೆಹಳ್ಳಿ ಪೊಲೀಸ್‌ ವ್ಯಾಪ್ತಿಯಲ್ಲಿ ನಡೆದಿದೆ.

ಏಪ್ರಿಲ್ 11 ರಂದು ಘಟನೆ ನಡೆದಿದ್ದು, ಯುವತಿ ಅರ್ಬಿನಾ ತಾಜ್ ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಅರ್ಬಾಜ್ (26) ಎಂದು ಗುರುತಿಸಲಾಗಿದೆ.

ಅರ್ಬಿನಾ ತಾಜ್ ಪತಿ ಸೈಯದ್ ಅಜಂ ಮತ್ತು ಅವರ ನಾಲ್ವರು ಮಕ್ಕಳೊಂದಿಗೆ ಸಾರಾಯಿಪಾಳ್ಯದ ಮಸೀದಿ ಫಾತಿಮಾ ಲೇಔಟ್‌ನಲ್ಲಿ ವಾಸವಿದ್ದು, ಆರೋಪಿ ತಾಜ್ ಅರ್ಬಿನಾ ಹಿಂದೆ ಬಿದ್ದು, ಪತಿಯನ್ನು ತೊರೆದ ತನನ್ನು ವಿವಾಹವಾಗುವಂತೆ ಪೀಡಿಸಲು ಆರಂಭಿಸಿದ್ದಾರೆ. ಈ ಸಂಬಂಧ ಅರ್ಬಿನಾ ಪತಿ ಹಾಗೂ ಅರ್ಬಾಜ್ ನಡುವೆ ಜಗಳವೂ ಆಗಿದೆ.

ಏಪ್ರಿಲ್ 10 ರಂದು ಅರ್ಬಿನಾಗೆ ಬೇರೆ ನಂಬರ್ ನಿಂದ ಕರೆ ಮಾಡಿರುವ ಆರೋಪಿ ಜಗಳವಾಡಿದ್ದಾನೆ. ಅದೇ ರಾತ್ರಿ ಅರ್ಬಿನಾ ಪತಿಯೊದಿಗೆ ರಂಜಾನ್ ಶಾಂಪಿಂಗ್'ಗೆ ತರಳಿದ್ದಾರೆ. ಏಪ್ರಿಲ್ 11 ರಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮತ್ತೆ ಕರೆ ಮಾಡಿರುವ ಆರೋಪಿ, ಮನೆಗೆ ಬೆಂಕಿ ಹಚ್ಚಿರುವುದಾಗಿ ತಿಳಿಸಿದ್ದಾನೆ. ದಂಪತಿ ಮನೆ ಬಳಿ ಧಾವಿಸಿದಾಗ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು ಕಂಡು ಬಂದಿದೆ.

ಅಗ್ನಿ ಅವಘಡದಲ್ಲಿ ಇಡೀ ಮನೆ ನಾಶವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಆರಂಭದಲ್ಲಿ ಶಂಕಿಸಲಾಗಿತ್ತು. ಎಫ್‌ಎಸ್‌ಎಲ್, ಎಸ್‌ಒಸಿಒ ಮತ್ತು ಎಲೆಕ್ಟ್ರಿಕಲ್ ಇನ್‌ಸ್ಪೆಕ್ಟರೇಟ್‌ನ ಅಧಿಕಾರಿಗಳು ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತನಿಖೆ ಪ್ರಗತಿಯಲ್ಲಿರುವ ಸಂದರ್ಭದಲ್ಲಿ ತಾಜ್ ಅವರು ಸೋಮವಾರ ಅರ್ಬಾಜ್ ವಿರುದ್ಧ ದೂರು ದಾಖಲಿಸಿದ್ದಾರೆ, ಅರ್ಬಾಜ್ ಮನೆಗೆ ಬೆಂಕಿ ಹಚ್ಚಿದ್ದಾರೆಂದು ಆರೋಪಿಸಿದ್ದಾರೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT