ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಳಕ್ಕೆ ಬೆಣ್ಣೆ ದೋಸೆ, ಫಿಲ್ಟರ್ ಕಾಫಿ, ಬಿಯರ್ ಆಫರ್!

ಮಹಾನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೆಲವು ಹೋಟೆಲ್ ಗಳಲ್ಲಿ ಬೆಣ್ಣೆ ದೋಸೆ, ಫಿಲ್ಟರ್ ಕಾಫಿ, ಬಿಯರ್ ಮತ್ತಿತರ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿದೆ.

ಬೆಂಗಳೂರು: ಮಹಾನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೆಲವು ಹೋಟೆಲ್ ಗಳಲ್ಲಿ ಬೆಣ್ಣೆ ದೋಸೆ, ಫಿಲ್ಟರ್ ಕಾಫಿ, ಬಿಯರ್ ಮತ್ತಿತರ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿದೆ. ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ನಲ್ಲಿ ಮತದಾನ ಮಾಡಿ ಗುರುತು ತೋರಿಸಿದವರಿಗೆ ಬೆಣ್ಣೆ ಖಾಲಿ ದೋಸೆ, ತುಪ್ಪದ ಲಾಡು ಮತ್ತು ತಂಪು ಪಾನಕವನ್ನು ಉಚಿತವಾಗಿ ನೀಡಲಾಗುತ್ತಿದೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಹೋಟೆಲ್ ಮಾಲೀಕ ಎಸ್ ಪಿ ಕೃಷ್ಣರಾಜ್, 2018 ರಿಂದ ಉಚಿತವಾಗಿ ಆಹಾರ ನೀಡುವ ಮೂಲಕ ಪ್ರಜಾಪ್ರಭುತ್ವ ಹಬ್ಬ ಆಚರಿಸುತ್ತಿರುವುದಾಗಿ ತಿಳಿಸಿದರು.

ಲುಲು ಮತ್ತು ಒರಿಯಾನ್ ಮಾಲ್ ನಲ್ಲಿ ಕಾಮತ್ ಹೊಸರುಚಿ ಮತ್ತು ಅಯ್ಯಂಗಾರ್ ಓವನ್ ಫ್ರೆಶ್‌ನಂತಹ ಆಹಾರ ಮಳಿಗೆಗಳು ಮತ್ತು ಬೇಕರಿಗಳು ಮತದಾರರಿಗೆ ಶೇ. 10 ರಷ್ಟು ರಿಯಾಯಿತಿ ನೀಡುತ್ತಿವೆ. ಇದೇ ವೇಳೆ ಕೆಫೆ ಉಡುಪಿ ರುಚಿ ಸೇರಿದಂತೆ ದರ್ಶಿನಿಗಳು ಪೂರಕ ಮಾಕ್‌ಟೇಲ್‌ಗಳನ್ನು ನೀಡಲಿದ್ದು, ಮಾಲ್ಗುಡಿ ಮೈಲಾರಿ ಮನೆ ಉಚಿತವಾಗಿ ಮೈಲಾರಿ ದೋಸೆ ಮತ್ತು ಫಿಲ್ಟರ್ ಕಾಫಿ ನೀಡುತ್ತಿದೆ.

ಇನ್ನೂ ಪಬ್ಸ್ ಮತ್ತು ಬ್ರೂವರೀಸ್ ಗಳು ಕೂಡಾ ಇದರಲ್ಲಿ ಪಾಲ್ಗೊಂಡಿವೆ. ಕಾಡುಬೀಸನಹಳ್ಳಿಯ ಡೆಕ್ ಆಫ್ ಬ್ರೂಸ್ ಗ್ರಾಹಕರಿಗೆ ಪೂರಕ ಬಿಯರ್ ನ್ನು ಉಚಿತವಾಗಿ ನೀಡಿದೆ. ಅವರ ಮಳಿಗೆಗಳಲ್ಲಿ ಮತದಾರರಿಗೆ ಶೇ. 20 ರಷ್ಟು ರಿಯಾಯಿತಿ ಕೂಡಾ ಒದಗಿಸಲಾಗಿದೆ. ಈ ಆಫರ್ ಒಂದು ವಾರದವರೆಗೂ ಇರಲಿದೆ.

ಈ ಕುರಿತು ಮಾತನಾಡಿದ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿಸಿ ರಾವ್, ಮತದಾನ ಪ್ರಮಾಣ ಹೆಚ್ಚಳ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಈ ಹಿಂದೆ ಶೇ. 54 ರಷ್ಟು ಮತದಾನವಾಗಿತ್ತು. ಅಸೋಯೇಷನ್ ಅಡಿಯಲ್ಲಿನ ಅನೇಕ ಹೋಟೆಲ್ ಗಳು ಪೂರಕ ಪಾನೀಯಗಳು, ಸಿಹಿತಿಂಡಿಗಳನ್ನು ನೀಡುತ್ತಿವೆ ಎಂದು ತಿಳಿಸಿದರು.

ಇದಲ್ಲದೆ, Rapido, BluSmart ಮತ್ತಿತರ ಕ್ಯಾಬ್ ಸಂಸ್ಥೆಗಳು ಕೂಡಾ ಹಿರಿಯ ನಾಗರಿಕರು ಮತ್ತು ದಿವ್ಯಾಂಗ ಮತದಾರರು ಮತಗಟ್ಟೆಗೆ ತೆರಳಲು ಉಚಿತ ಪ್ರಯಾಣದ ಆಫರ್ ನೀಡಿವೆ. ಬಿಡದಿ ಬಳಿಯ ವಂಡರ್ಲಾ ಅಮ್ಯೂಸ್‌ಮೆಂಟ್ ಪಾರ್ಕ್, ಏಪ್ರಿಲ್ 26, 27 ಮತ್ತು 28 ರಂದು ಪಾರ್ಕ್ ಟಿಕೆಟ್‌ಗಳ ಶೇ. 15 ರಷ್ಟು ರಿಯಾಯಿತಿ ನೀಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT