ಮಹಿಳೆ ಹಾಗೂ ವೈದ್ಯ 
ರಾಜ್ಯ

ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ: ಪ್ರಾಥಮಿಕ ಚಿಕಿತ್ಸೆ ನೀಡಿ ಜೀವ ಉಳಿಸಿದ ವೈದ್ಯ!

ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾಗಿದ್ದು, ಇದೇ ವೇಳೆ ಮತಹಕ್ಕು ಚಲಾಯಿಸಲು ಬಂದಿದ್ದ ವೈದ್ಯರೊಬ್ಬರು ಆಕೆಯ ಜೀವ ಉಳಿದ ಘಟನೆ ನಗರದ ಜೆ.ಪಿ.ನಗರ 8 ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ.

ಬೆಂಗಳೂರು: ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾಗಿದ್ದು, ಇದೇ ವೇಳೆ ಮತಹಕ್ಕು ಚಲಾಯಿಸಲು ಬಂದಿದ್ದ ವೈದ್ಯರೊಬ್ಬರು ಆಕೆಯ ಜೀವ ಉಳಿದ ಘಟನೆ ನಗರದ ಜೆ.ಪಿ.ನಗರ 8 ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ.

ಸುಮಾರು ಐವತ್ತರ ಆಸುಪಾಸಿನ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದರು. ಸ್ಥಳದಲ್ಲಿ ಕ್ಯಾನ್ ನಲ್ಲಿದ್ದ ನೀರು ಕುಡಿಯಲು ಮಹಿಳೆ ಹೋಗಿದ್ದು, ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅದೃಷ್ಟವಶಾತ್ ಇದೇ ಸಂದರ್ಭದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಡಾ.ಗಣೇಶ್ ಶ್ರೀನಿವಾಸ್ ಪ್ರಸಾದ್ ಎಂಬುವವರು ಮಹಿಳೆಯ ನಾಡಿ ಮಿಡಿತವನ್ನು ಪರಿಶೀಲಿಸಿದ್ದಾರೆ.

ನಾಡಿಮಿಡಿತ ಕಡಿಮೆಯಾಗಿರುವುದು ತಿಳಿದುಬದಿದೆ. ದೇಹ ಕೂಡ ಯಾವುದೇ ಪ್ರತಿಕ್ರಿಯೆಯನ್ನು ತೋರಿಸುತ್ತಿರಲಿಲ್ಲ. ತಕ್ಷಣ ಸ್ಥಳದಲ್ಲೇ CPR ಮಾಡಿ, ಆರೋಗ್ಯ ಚೇತರಿಸಿಕೊಳ್ಳುವಂತೆ ಮಾಡಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿದ್ದವರು ಮಹಿಳೆಯ ನೆರವಿಗೆ ಬಂದಿದ್ದಾರೆ. ಬಳಿಕ ಐದು ನಿಮಿಷದೊಳಗೆ ಆ್ಯಂಬುಲೆನ್ಸ್ ಸ್ಥಳಕ್ಕೆ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವೈದ್ಯ ಗಣೇಶ್​ ಶ್ರೀನಿವಾಸ್​ ಪ್ರಸಾದ್​ ಮಾತನಾಡಿ, 50 ಆಸುಪಾಸಿನ ಮಹಿಳೆಯೊಬ್ಬರು ಕ್ಯಾನ್‌ನಲ್ಲಿ ನೀರು ಕುಡಿಯಲು ಬಂದಿದ್ದರು. ಮಹಿಳೆ ಅಸ್ವಸ್ಥರಾಗುತ್ತಿರುವುದು ಕಂಡು ನೆರವಿಗೆ ಧಾವಿಸಿದೆ. ಬಳಿಕ ಅವರ ನಾಡಿಮಿಡಿತವನ್ನು ಪರಿಶೀಲಿಸಿದೆ. ನಾಡಿಮಿಡಿತ ತುಂಬಾ ಕಡಿಮೆಯಾಗಿದೆ ಅಂತ ಕಂಡುಬಂತು. ಕಣ್ಣುಗಳು ಮೇಲಕ್ಕೆತ್ತಿ ಧಿಡೀರನೆ ಕುಸಿದರು. ಅವರ ದೇಹದಲ್ಲಿ ಚಲನವಲ ಇರಲಿಲ್ಲ. ಉಸಿರುಗಟ್ಟುತ್ತಿದ್ದರು. ತಕ್ಷಣ ಸಿಪಿಆರ್ ಮಾಡಿದೆ. ಸ್ವಲ್ಪ ಗುಣಮುಖರಾದರು. ಅವರ ಸ್ಥಿತಿ ಸುಧಾರಿಸಿತು. ಬಳಿಕ ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದರು. ಆಂಬ್ಯುಲೆನ್ಸ್​ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. 5 ನಿಮಿಷ ವಿಳಂಬವಾಗಿದ್ದರೂ ಆಕೆ ಬದುಕುಳಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಆನೇಕಲ್‌ ಬಳಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ. ಟೆಂಡರ್: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ ಸಮುಚ್ಚಯ !

SCROLL FOR NEXT