ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ಮರಳು ದಂಧೆ ಅಡ್ಡೆ ಮೇಲೆ ದಾಳಿ: ಭೂ ವಿಜ್ಞಾನಿಗೆ ಕೊಲ್ಲುವ ಬೆದರಿಕೆ, ದೂರು ದಾಖಲು

ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದವರಿಂದ ಹಲ್ಲೆಗೊಳಗಾದ ಹಿರಿಯ ಭೂವಿಜ್ಞಾನಿ ಆಶಾ ಎಂಎಸ್ ಅವರು ಉತ್ತರ ಕನ್ನಡ ಪೊಲೀಸರಿಗೆ ಪತ್ರ ಬರೆದಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ ವಿಜ್ಞಾನಿಗಳಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಕಾರವಾರ: ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದವರಿಂದ ಹಲ್ಲೆಗೊಳಗಾದ ಹಿರಿಯ ಭೂವಿಜ್ಞಾನಿ ಆಶಾ ಎಂಎಸ್ ಅವರು ಉತ್ತರ ಕನ್ನಡ ಪೊಲೀಸರಿಗೆ ಪತ್ರ ಬರೆದಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ ವಿಜ್ಞಾನಿಗಳಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಹೊನ್ನಾವರ ತಾಲೂಕಿನ ಆರೋಳಿ ಗ್ರಾಮಕ್ಕೆ ಬುಧವಾರ ಆಶಾ ಅವರು ಭೇಟಿ ನೀಡಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ್ದರು. ಆದರೆ, 12 ಮಂದಿ ಸ್ಥಳೀಯರ ತಂಡ ಆಕೆಯನ್ನು ತಡೆದು ನಿಂದಿಸಿ ಕೊಲೆ ಬೆದರಿಕೆ ಹಾಕಿದೆ.

ಅಲ್ಲಿಂದ ಹೊನ್ನಾವರಕ್ಕೆ ಹಿಂತಿರುಗಿದ ಅವರು ನೇರವಾಗಿ ಪೊಲೀಸರಿಗೆ ದೂರು ದಾಖಲಿಸಲು ತೆರಳಿದರು. ಹೊನ್ನಾವರದ ತುಂಬೊಳ್ಳಿ ನಿವಾಸಿ ಜಗದೀಶ್ ನಾಯ್ಕ್, ಹೊನ್ನಾವರ ಪಟ್ಟಣದ ಮಂಜು ಶೆಟ್ಟಿ ಮತ್ತು ಮುರಳೀಧರ ಶೆಟ್ಟಿ, ನವೀನ್ ನಾಯ್ಕ್, ಮಹೇಶ್ ನಾಯ್ಕ್, ನಾಗರಾಜ ಮೇಸ್ತ, ಜಾಕಿ ಅಲ್ಮೇಡ, ಸುಬ್ರಹ್ಮಣ್ಯ ನಾಯ್ಕ್, ಪ್ರದೀಪ್ ನಾಯ್ಕ್, ಶೇಖರ್ ಗೌಡ, ವಿಶ್ವನಾಥ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ಕುರಿತು ಪದೇ ಪದೇ ದೂರುಗಳು ಬಂದ ಹಿನ್ನೆಲೆಯಲ್ಲಿ ಮುದಕಿನಿಯಲ್ಲಿ ತನ್ನ ಸಹೋದ್ಯೋಗಿಗಳೊಂದಿಗೆ ದಾಳಿ ನಡೆಸಿರುವುದಾಗಿ ಆಶಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಾವು ಮರಳು ಲೋಡ್ ಮತ್ತು ಅಕ್ರಮ ಮರಳು ಸಾಗಿಸುವ ವಾಹನಗಳ ದಾರಿಯನ್ನು ಕಂಡುಕೊಂಡಿದ್ದೇವೆ. ಮರಳು ತುಂಬಲು ಬಳಸುತ್ತಿದ್ದ ವಸ್ತಗಳನ್ನು ವಶಪಡಿಸಿಕೊಂಡು ಸ್ಥಳದಿಂದ ತೆರಳುತ್ತಿದ್ದೆವು. ಆ ವೇಳೆ ಆರೋಪಿಗಳು ನಮ್ಮ ವಾಹನಗಳನ್ನು ಹಿಂಬಾಲಿಸಿದರು, ಮೊಳೆಗಳನ್ನು ಎಸೆದು ನಮ್ಮ ವಾಹನವನ್ನು ಪಂಕ್ಚರ್ ಮಾಡ್ದರು. ನಂತರ ನನ್ನನ್ನು ಅವಾಚ್ಯವಾಗಿ ನಿಂದಿಸಿದರು. ಮತ್ತೆ ಬರಬೇಡಿ ಎಂದು ಎಚ್ಚರಿಸಿದರು. ಒಂದು ವೇಳೆ ನಾನು ಮತ್ತೆ ಅಲ್ಲಿಗೆ ಹೋದರೆ, ನನ್ನನ್ನು ಅಟ್ಟಾಡಿಸಿಕೊಂಡು ಹೊಡೆದು ಸಾಯಿಸುವ ಬೆದರಿಕೆ ಹಾಕಿದ್ದಾರೆ ಎಂದು ಆಶಾ ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ದೂರಿನ ಮೇರೆಗೆ ಇದೀಗ ಎಲ್ಲಾ 12 ಮಂದಿಯನ್ನು ಬಂಧಿಸಲಾಗಿದೆ. ನಾವು ದಾಳಿ ಮಾಡಲು ಮೈದಾನಕ್ಕೆ ಹೋಗುವಾಗ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದರು. ಆಶಾ ಮೇಲಿನ ಹಲ್ಲೆಯನ್ನು ಉತ್ತರ ಕನ್ನಡ ಡಿಸಿ, ತೀವ್ರವಾಗಿ ಖಂಡಿಸಿದ್ದು, ಆಕೆಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT