ಚುನಾವಣಾ ಕರ್ತವ್ಯದಲ್ಲಿ ಅಧಿಕಾರಿಗಳು (ಸಾಂದರ್ಭಿಕ ಚಿತ್ರ) 
ರಾಜ್ಯ

Loksabha Election 2024: ಕೊನೆಗೂ ಸಂಧಾನ, Voting ಬಹಿಷ್ಕರಿಸಿದ್ದ ಗ್ರಾಮಸ್ಥರಿಂದ ಸಂಜೆ ಮತದಾನ!

ಮೂಲಸೌಕರ್ಯ ಮತ್ತು ವಿವಿಧ ಸಮಸ್ಯೆಗಳ ಮುಂದಿಟ್ಟುಕೊಂಡು ಇಂದು ನಡೆದ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸಿದ್ದ ಚಿತ್ರದುರ್ಗದ ಗ್ರಾಮಸ್ಥರು ಕೊನೆಗೂ ಸಂಧಾನದ ಬಳಿಕ ಮತದಾನಕ್ಕೆ ಮುಂದಾಗಿದ್ದಾರೆ.

ಚಿತ್ರದುರ್ಗ: ಮೂಲಸೌಕರ್ಯ ಮತ್ತು ವಿವಿಧ ಸಮಸ್ಯೆಗಳ ಮುಂದಿಟ್ಟುಕೊಂಡು ಇಂದು ನಡೆದ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸಿದ್ದ ಚಿತ್ರದುರ್ಗದ ಗ್ರಾಮಸ್ಥರು ಕೊನೆಗೂ ಸಂಧಾನದ ಬಳಿಕ ಮತದಾನಕ್ಕೆ ಮುಂದಾಗಿದ್ದಾರೆ.

ಹೌದು... ಚಿತ್ರದುರ್ಗದ ಯರೆಹಳ್ಳಿ, ಸಿದ್ದಾಪುರ ಗ್ರಾಮದ ಜನತೆಯು ತಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಎಷ್ಟೇ ಮನವಿ ಮಾಡಿದರೂ ಜನಪ್ರತಿನಿಧಿಗಳು ಕ್ಯಾರೇ ಎನ್ನುತ್ತಿಲ್ಲ. ಚುನಾವಣೆ ಬಂದಾಗ ಮಾತ್ರ ನಮ್ಮ ನೆನಪು ಬರುತ್ತದೆ. ಹೀಗಾಗಿ ನಾವು ಈ ಬಾರಿ ಮತವನ್ನೇ ಚಲಾವಣೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಮತದಾನವನ್ನು ಬಹಿಷ್ಕರಿಸಿ ಕುಳಿತಿದ್ದರು.

ಆದರೆ, ಚುನಾವಣಾ ಅಧಿಕಾರಿಗಳು ಈ ಗ್ರಾಮಸ್ಥರ ಮನವೊಲಿಕೆಗೆ ಬೆಳಗ್ಗೆಯಿಂದಲೇ ಕಸರತ್ತು ನಡೆಸಿದ್ದರು. ಕೊನೆಗೂ ಅವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ.

ಚುನಾವಣಾ ಅಧಿಕಾರಿಗಳು ಈ ಗ್ರಾಮಸ್ಥರ ಮನವೊಲಿಕೆಗೆ ಬೆಳಗ್ಗೆಯಿಂದಲೇ ಕಸರತ್ತು ನಡೆಸಿದ್ದರು. ಕೊನೆಗೂ ಅವರ ಮನವೊಲಿಸುವಲ್ಲಿ ಸಫಲರಾಗಿದ್ದು, ಇಲ್ಲಿ ಸಂಜೆ ವೇಳೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಸಂಜೆ 7 ಗಂಟೆಯಾದರೂ ಮತದಾರರು ಮತಗಟ್ಟೆಗಳಲ್ಲಿ ಸರತಿ ಸಾಲಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಸ್ಟ್ರಾಂಗ್‌ ರೂಂನತ್ತ ಇವಿಎಂ, ವಿವಿಪ್ಯಾಟ್‌

ಇನ್ನು ರಾಜ್ಯದ ಉಳಿದೆಡೆ ಮತದಾನ ಮುಕ್ತಾಯವಾದ ಕಡೆ ಚುನಾವಣಾಧಿಕಾರಿಗಳು ಇವಿಎಂ (EVM), ವಿವಿ ಪ್ಯಾಟ್‌ ಬಾಕ್ಸ್‌ಗಳನ್ನು ಪ್ಯಾಕಿಂಗ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದರು. ಪ್ಯಾಕಿಂಗ್ ಮಾಡಿದವರು ಸ್ಟ್ರಾಂಗ್ ರೂಂಗೆ ತೆಗೆದುಕೊಂಡು ಹೋಗಿ ಇಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT