ಐಟಿ ಇಲಾಖೆ  
ರಾಜ್ಯ

ಕಲಬುರಗಿ: ಐಟಿ ಅಧಿಕಾರಿಗಳ ದಾಳಿ, 2 ಕೋಟಿ ರೂ. ನಗದು ಜಪ್ತಿ, ಕಾಂಗ್ರೆಸ್ ಮಾಜಿ ಮೇಯರ್ ಕಾರು ವಶ

ಕಲಬುರಗಿ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಹಲವಡೆ ಐಟಿ ಇಲಾಖೆ ಅಧಿಕಾರಿಗಳ ದಾಳಿ ಮುಂದುವರಿದಿದೆ. ಇಂದು ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ.

ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ಹೊರಡುವ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಸದ್ಯ ನಗದು ಮತ್ತು ಕಾರನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಒಬ್ಬರಿಗೆ ಸೇರಿದ ಕಾರು ಇದು ಎಂದು ಹೇಳಲಾಗಿದೆ.

ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕ ವ್ಯಾಪ್ತಿಯ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಹಿನ್ನೆಲೆಯಲ್ಲಿ ಇಂದು ನಡೆದಿರುವ ಐಟಿ ದಾಳಿ, ಮಹತ್ವದ್ದಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ಮೊನ್ನೆ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಸುಧಾಕರ್ ಮೇಲೆ ಇದೀಗ ಎಫ್ಐರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!