ರಾಜ್ಯ

Loksabha Election 2024: ಕರ್ನಾಟಕದಲ್ಲಿ ದಾಖಲೆಯ ಶೇ.69.56ರಷ್ಟು ಮತದಾನ, ಚುನಾವಣಾ ಆಯೋಗದ ಪರಿಷ್ಕೃತ ಮಾಹಿತಿ!

ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ನಡೆದ ಮತದಾನ ಅಂತಿಮ ಮಾಹಿತಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ.69.56ರಷ್ಟು ಮತದಾನವಾಗಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರು: ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ನಡೆದ ಮತದಾನ ಅಂತಿಮ ಮಾಹಿತಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ.69.56ರಷ್ಟು ಮತದಾನವಾಗಿದೆ ಎಂದು ಮಾಹಿತಿ ನೀಡಿದೆ.

ನಿನ್ನೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಕೆಲ ಕ್ಷೇತ್ರಗಳಲ್ಲಿ ತಾಂತ್ರಿಕ ದೋಷ ಮತ್ತು ಮತದಾನ ಬಹಿಷ್ಕಾರದಂತಹ ಘಟನೆಗಳ ನಡುವೆ ಅಧಿಕಾರಿಗಳು ಸಂಧಾನ ಮಾಡಿ ಮತದಾನದ ಅವಧಿ ಮುಕ್ತಾಯದ ಬಳಿಕ ಮತದಾನ ಮಾಡಿಸುವಲ್ಲಿ ಸಫಲರಾಗಿದ್ದರು.

ಹಲವು ಮತಗಟ್ಟೆಗಳಲ್ಲಿ ಸಂಜೆ 7 ಗಂಟೆಯವರೆಗೂ ಮತದಾನ ನಡೆದಿತ್ತು. ಪರಿಣಾಮ ಬಹುತೇಕ ಎಲ್ಲ ಮತಗಟ್ಟೆಗಳಲ್ಲಿಯೂ ಮತದಾನ ನಡೆದಿತ್ತು. ಇದೀಗ ಚುನಾವಣಾ ಆಯೋಗ ಈಗ ಮತದಾನದ ಪ್ರಮಾಣದ ಮಾಹಿತಿ ಬಿಡುಗಡೆ ಮಾಡಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಪರಿಷ್ಕೃತ ಮಾಹಿತಿಯಲ್ಲಿ ನಿನ್ನೆ ರಾಜ್ಯಾದ್ಯಂತ ಒಟ್ಟಾರೆ ಶೇ.69.56ರಷ್ಟು ಮತದಾನವಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ ಅಂದರೆ ಶೇ.81.67ರಷ್ಟು ಮತದಾನವಾಗಿದ್ದು, ಬೆಂಗಳೂರು ದಕ್ಷಿಣದಲ್ಲಿ ಕನಿಷ್ಠ ಅಂದರೆ ಶೇ.53.17ರಷ್ಟು ಮತದಾನವಾಗಿದೆ ಎಂದು ಚುನವಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯದ ಒಟ್ಟು 14 ಕ್ಷೇತ್ರಗಳಲ್ಲಿ ಶೇಕಡಾ 69.56ರಷ್ಟು ಮತದಾನವಾಗಿದ್ದು, ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇಕಡಾ 77.15ರಷ್ಟು ಮತದಾನ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 77.68ರಷ್ಟು ಮತದಾನ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 77.56ರಷ್ಟು ಮತದಾನ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 73.30ರಷ್ಟು ಮತದಾನ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 78.05ರಷ್ಟು ಮತದಾನ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ. 81.67ರಷ್ಟು ಮತದಾನ

ಮೈಸೂರು-ಕೊಡಗು ಕ್ಷೇತ್ರದಲ್ಲಿ ಶೇಕಡಾ 70.62ರಷ್ಟು ಮತದಾನ

ಚಾಮರಾಜನಗರ ಕ್ಷೇತ್ರದಲ್ಲಿ ಶೇಕಡಾ 76.81ರಷ್ಟು ಮತದಾನ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇಕಡಾ 68.30ರಷ್ಟು ಮತದಾನ

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ. 54.45ರಷ್ಟು ಮತದಾನ

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇ. 54.06ರಷ್ಟು ಮತದಾನ

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 53.17ರಷ್ಟು ಮತದಾನ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 77.00ರಷ್ಟು ಮತದಾನ

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 78.27ರಷ್ಟು ಮತದಾನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT