ಅಪಘಾತ 
ರಾಜ್ಯ

Accident: ಕಲಬುರಗಿಯಲ್ಲಿ ಭೀಕರ ಅಪಘಾತ: ಲಾರಿ- ಬೈಕ್‌ ಢಿಕ್ಕಿ; ಪತ್ನಿ ಎದುರೇ ಪ್ರಾಣಬಿಟ್ಟ ಪತಿ

ಕಲಬುರಗಿಯಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ- ಬೈಕ್‌ ಢಿಕ್ಕಿಯಾಗಿ ಓರ್ವ ವ್ಯಕ್ತಿ ಸಾವಪ್ಪಿದ್ದಾರೆ.

ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ- ಬೈಕ್‌ ಢಿಕ್ಕಿಯಾಗಿ ಓರ್ವ ವ್ಯಕ್ತಿ ಸಾವಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಈ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದಾರೆ.

ಕೂಡಲೇ ಸ್ಥಳಕ್ಕೆ ಓಡಿಬಂದ ಸ್ಥಳೀಯರು ಗಾಯಾಳು ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?