ಸಾಂದರ್ಭಿಕ ಚಿತ್ರ  
ರಾಜ್ಯ

ಬಿರು ಬಿಸಿಲಿನಲ್ಲಿ ಚುನಾವಣೆ: 3ನೇ ಹಂತದ ಮತದಾನ ಪ್ರಕ್ರಿಯೆಗೆ ಸಜ್ಜಾಗುತ್ತಿರುವ ಉತ್ತರ ಕರ್ನಾಟಕ

ದೇಶದಲ್ಲಿ ಮೂರನೇ ಹಂತದ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣದಲ್ಲಿ ಅಲ್ಪ ಏರಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಸರಾಸರಿ ಮತದಾನದ ಪ್ರಮಾಣವು ಸುಮಾರು 67-68% ಆಗಿರಬಹುದು. ಹೆಚ್ಚಿನ ತಾಪಮಾನದ ಕಾರಣ, ಸಂಜೆ 5 ಗಂಟೆಯ ನಂತರ ಮತ್ತು ಬೆಳಿಗ್ಗೆ 9 ಗಂಟೆಯ ಮೊದಲು ಮತದಾರರ ಮತದಾನ ಸಂಖ್ಯೆ ಹೆಚ್ಚಾಗಬಹುದು ಎಂದು ನಿರೀಕ್ಷಿಸುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಗಳೂರು: ದಕ್ಷಿಣ ಮತ್ತು ಕರಾವಳಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದ ಒಂದು ದಿನದ ನಂತರ ಚುನಾವಣಾಧಿಕಾರಿಗಳ ಗಮನ ಕಿತ್ತೂರು, ಕಲ್ಯಾಣ ಮತ್ತು ಮಲೆನಾಡು ಕರ್ನಾಟಕ ಪ್ರದೇಶಗಳತ್ತ ನೆಟ್ಟಿದೆ. ಮೇ 7 ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿ ಚುನಾವಣೆ ನಡೆಯಲಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಅಧಿಕಾರಿಯೊಬ್ಬರು TNIE ಪ್ರತಿನಿಧಿಯೊಂದಿಗೆ ಮಾತನಾಡುತ್ತಾ, ಇಲ್ಲಿ ಒಂದೊಂದು ಜಿಲ್ಲೆಯಲ್ಲಿ ಸಮಸ್ಯೆಗಳು ವಿಭಿನ್ನವಾಗಿವೆ. ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು, ಬಳ್ಳಾರಿ, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ಬಿಸಿ ಮತ್ತು ಶುಷ್ಕ ಹವಾಮಾನದ ಸ್ಥಿತಿ ಚಿಂತಾಜನಕವಾಗಿದ್ದರೂ, ಪಶ್ಚಿಮ ಮತ್ತು ಪೂರ್ವದ ಘಟ್ಟ ಪ್ರದೇಶಗಳ ಭೂಪ್ರದೇಶವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಅವರು ಹೇಳಿದರು.

ಒಟ್ಟು 172 ಪೊಲೀಸ್ ಗಡಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ, ಜೊತೆಗೆ 40 ಅಬಕಾರಿ ಇಲಾಖೆಯಿಂದ ನಿರ್ವಹಿಸಲಾಗಿದೆ. ಅಗತ್ಯವಿದ್ದರೆ, ಇನ್ನಷ್ಟು ರಚಿಸಲಾಗುವುದು. ದೇಶದಲ್ಲಿ ಮೂರನೇ ಹಂತದ ಚುನಾವಣೆ ಪ್ರಕ್ರಿಯೆ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಮತದಾನ ಪೂರ್ಣಗೊಳ್ಳುವವರೆಗೆ, ತಮಿಳುನಾಡು ಮತ್ತು ಕೇರಳದ ಗಡಿ ಪ್ರದೇಶಗಳು -- ಹಂತ-2 ರ ಅಡಿಯಲ್ಲಿ 19 ಅರಣ್ಯ ಚೆಕ್‌ಪೋಸ್ಟ್‌ಗಳು ಮತ್ತು 15 ಸಾರಿಗೆ ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಮೂರನೇ ಹಂತದ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣದಲ್ಲಿ ಅಲ್ಪ ಏರಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಸರಾಸರಿ ಮತದಾನದ ಪ್ರಮಾಣವು ಸುಮಾರು 67-68% ಆಗಿರಬಹುದು. ಹೆಚ್ಚಿನ ತಾಪಮಾನದ ಕಾರಣ, ಸಂಜೆ 5 ಗಂಟೆಯ ನಂತರ ಮತ್ತು ಬೆಳಿಗ್ಗೆ 9 ಗಂಟೆಯ ಮೊದಲು ಮತದಾರರ ಮತದಾನ ಸಂಖ್ಯೆ ಹೆಚ್ಚಾಗಬಹುದು ಎಂದು ನಿರೀಕ್ಷಿಸುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

2,59,17,493 - ಹಂತ-3ರಲ್ಲಿ ಚುನಾವಣೆಗೆ ಒಳಪಡುವ ಒಟ್ಟು ಮತದಾರರ ಸಂಖ್ಯೆ

1,29,66,570 - ಮಹಿಳೆಯರು

1,29,48,978 - ಪುರುಷರು

28,269 - ಮತದಾನ ಕೇಂದ್ರಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT