ಸಾಂದರ್ಭಿಕ ಚಿತ್ರ 
ರಾಜ್ಯ

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮನವಿ: ಪ್ರಕರಣ ದಾಖಲು

ತನ್ನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ ಹಾಕುವಂತೆ ಸಂದೇಶ ಮುದ್ರಿಸಿದ್ದ ವರನ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು: ತನ್ನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ ಹಾಕುವಂತೆ ಸಂದೇಶ ಮುದ್ರಿಸಿದ್ದ ವರನ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚುನಾವಣಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಪ್ರಸಾದ್ ಅಲಿಯಾಸ್ ರವಿ ಎಪ್ರಿಲ್ 18 ರಂದು ಕಡಬ ತಾಲೂಕಿನ ಗೋಳಿತೊಟ್ಟು ಎಂಬಲ್ಲಿ ವಿವಾಹವಾಗಿದ್ದರು.

ಮಾರ್ಚ್ 1 ರಂದು ಅವರು ಮುದ್ರಿಸಿದ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ, ರವಿ ತಮ್ಮ ಸಂಬಂಧಿಕರು ಮತ್ತು ಇತರ ಅತಿಥಿಗಳಿಗೆ ಮದುವೆಗೆ ತಾವು ನೀಡಬಹುದಾದ ದೊಡ್ಡ ಉಡುಗೊರೆ ಎಂದರೆ ಬಲಿಷ್ಠ ಭಾರತಕ್ಕಾಗಿ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆ ಮಾಡುವುದು ಎಂದು ಸಂದೇಶ ಮುದ್ರಿಸಿದ್ದರು.

ಆಮಂತ್ರಣ ಪತ್ರಿಕೆಯಲ್ಲಿನ ಸಂದೇಶದ ಬಗ್ಗೆ ಮಾಹಿತಿ ಪಡೆದ ಚುನಾವಣಾಧಿಕಾರಿಗಳು ಏಪ್ರಿಲ್ 14 ರಂದು ರವಿ ಅವರ ಮನೆಗೆ ಭೇಟಿ ನೀಡಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ರವಿ ಅವರು, ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿದೆ ಎಂದು ಅವರಿಗೆ ತಿಳಿಸಿದ್ದಾರೆ.

ರವಿ ಅವರು ಸುಮಾರು 750 ಆಮಂತ್ರಣ ಪತ್ರಿಕೆಗಳನ್ನು ವಿತರಿಸಿದ್ದು, ಸಂದೇಶವನ್ನು ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸದಂತೆ ಲಿಖಿತ ಬರವಣಿಗೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಏಪ್ರಿಲ್ 26 ರಂದು ಮತದಾನ ನಡೆದ ಬಳಿಕ ಚುನಾವಣಾಧಿಕಾರಿಗಳು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಆಮಂತ್ರಣ ಪತ್ರಿಕೆ ಮುದ್ರಿಸಿದವರನ್ನೂ ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬಿಜೆಪಿ ಕಿಡಿ

ಈ ನಡುವೆ ಪ್ರಕರಣ ದಾಖಲಿಸಿರುವ ಸಂಬಂಧ ಬಿಜೆಪಿ ಕಿಡಿ ಕಾರಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ದಬ್ಬಾಳಿಕೆ ನಡೆಸುತ್ತಿದೆ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯವರ ಭಾವಚಿತ್ರ ಪ್ರಕಟಿಸಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಕೋರಿದ್ದಾರೆ. ಆದರೆ, ಸಿದ್ದರಾಮಯ್ಯ ಸರ್ಕಾರ ಇದರ ಮೇಲೂ ಕಳ್ಳಗಣ್ಣು ಬಿಟ್ಟು ದೂರು ದಾಖಲಿಸಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿಯವರಿಗೆ ಸಿಗುತ್ತಿರುವ ವ್ಯಾಪಕ ಬೆಂಬಲ ನೋಡಿ ಕಾಂಗ್ರೆಸ್ಸಿಗರ ಕೈಯಲ್ಲಿ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ ಹೇಡಿ ಸರ್ಕಾರ ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ