ಮೆಟ್ರೋ ನಿಲ್ದಾಣದ ಶೌಚಾಲಯದಲ್ಲಿ ಭಿತ್ತಿಪತ್ರ TNIE
ರಾಜ್ಯ

Namma Metro: 'ಚಾಕೊಲೆಟ್' ಪ್ರಚಾರಕ್ಕೆ ಮೆಟ್ರೋ ವಾಶ್ ರೂಂನಲ್ಲಿ ಕ್ಯೂಆರ್ ಕೋಡ್: ವ್ಯಕ್ತಿ ಬಂಧನ

ಇತ್ತೀಚೆಗೆ ಚಾಕೊಲೆಟ್ ಉದ್ಯಮ ಆರಂಭಿಸಿದ್ದ ವ್ಯಕ್ತಿಯೋರ್ವ ತನ್ನ ಉತ್ಪನ್ನ ಪ್ರಚಾರಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಲ್ದಾಣದ ಶೌಚಾಲಯಗಳಲ್ಲಿ ಭಿತ್ತಿಪತ್ರ ಅಂಟಿಸಿ ಸಿಕ್ಕಿಬಿದ್ದಿದ್ದು, ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಚಾಕೊಲೆಟ್ ಉದ್ಯಮ ಆರಂಭಿಸಿದ್ದ ವ್ಯಕ್ತಿಯೋರ್ವ ತನ್ನ ಉತ್ಪನ್ನ ಪ್ರಚಾರಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಲ್ದಾಣದ ಶೌಚಾಲಯಗಳಲ್ಲಿ ಭಿತ್ತಿಪತ್ರ ಅಂಟಿಸಿ ಸಿಕ್ಕಿಬಿದ್ದಿದ್ದು, ಪೊಲೀಸರ ಅತಿಥಿಯಾಗಿದ್ದಾರೆ.

ಹೌದು.. ಸ್ಟಾರ್ಟ್-ಅಪ್​ ಉದ್ಯೋಗಿ ಅರುಣ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಏಪ್ರಿಲ್ 23 ರಂದು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್​ ಕೋಡ್​ ಅಂಟಿಸುವಾಗ ಸಿಕ್ಕಿಬಿದಿದ್ದರು ಎನ್ನಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಬಂಧಿತ ಅರುಣ್ ಚಾಕೊಲೇಟ್ (chocolate) ಉತ್ಪನ್ನಗಳ ಸ್ಟಾರ್ಟಪ್ ಆರಂಭಿಸಿದ್ದರು. 28 ವರ್ಷದ ಸ್ಟಾರ್ಟಪ್ ಉದ್ಯಮಿ ಅರುಣ್ ತಲಘಟ್ಟಪುರ ನಿವಾಸಿಯಾಗಿದ್ದು, ತಮ್ಮ ಚಾಕೊಲೇಟ್ (chocolate) ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದಾಗಿ ನಗರದಾದ್ಯಂತ ಮೆಟ್ರೋ (metro) ವಾಶ್‌ರೂಮ್‌ಗಳಲ್ಲಿ ಕ್ಯೂಆರ್​ ಕೋಡ್​​ಗಳನ್ನು ಅಂಟಿಸುತ್ತಿದ್ದರು.

ಏಪ್ರಿಲ್ 23 ರಂದು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್​ ಕೋಡ್​ ಅಂಟಿಸುವಾಗ ಸಿಕ್ಕಿಬಿದಿದ್ದು, ಅನುಮತಿಯಿಲ್ಲದೆ ಭಿತ್ತಿಪತ್ರ ಅಂಟಿಸಿದ್ದಕ್ಕಾಗಿ ಮೆಟ್ರೋ ನಿಲ್ದಾಣ ಭದ್ರತಾ ಸಿಬ್ಬಂದಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅರುಣ್​ ವಿರುದ್ಧ ಮೆಟ್ರೋ ಭದ್ರತಾ ಸಿಬ್ಬಂದಿ ಪ್ರಕರಣ ದಾಖಲಿಸಿದ್ದು, ಸದ್ಯ ಬೆಂಗಳೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.

ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಸಹಾಯಕ ಭದ್ರತಾ ಅಧಿಕಾರಿ ಚಂದ್ರಶೇಖರಯ್ಯ ಅವರು ನೀಡಿದ ದೂರಿನ ಪ್ರಕಾರ, ಏಪ್ರಿಲ್ 23 ರಂದು ಮಧ್ಯಾಹ್ನ 2.45 ರ ಸುಮಾರಿಗೆ ಸ್ಟೇಷನ್‌ನ ವಾಶ್‌ರೂಮ್‌ನಲ್ಲಿ ಸ್ಟಿಕ್ಕರ್‌ಗಳನ್ನು ಅಂಟಿಸುವಾಗ ಅರುಣ್ ಸಿಕ್ಕಿಬಿದ್ದಿದ್ದಾರೆ. ನಗರದಾದ್ಯಂತ ಇರುವ ನಮ್ಮ ಮೆಟ್ರೋ ನಿಲ್ದಾಣಗಳ ವಾಶ್ ರೂಂನಲ್ಲಿ ಅರುಣ್ ಕ್ಯೂಆರ್ ಕೋಡ್ ಸ್ಟಿಕ್ಕರ್‌ಗಳನ್ನು ಅಂಟಿಸಿದ್ದಾರೆ.

“ನಿಮ್ಮ ಪ್ರೀತಿಪಾತ್ರರನ್ನು ಡಿಜಿರ್‌ನೊಂದಿಗೆ ಆಕರ್ಷಿಸಿ. ನನ್ನನ್ನು ಸ್ಕ್ಯಾನ್ ಮಾಡಿ” ಎಂದು ಟ್ಯಾಗ್ ಲೈನ್ ನೀಡಿದ್ದಾರೆ.

ಗೆರಿಲ್ಲಾ ಮಾರ್ಕೆಟಿಂಗ್ ತಂತ್ರಗಾರಿಕೆ!

ಬಂಧಿತ ಅರುಣ್ ಚಾಕೊಲೇಟ್ ಉತ್ಪನ್ನಗಳ ಮಾರಾಟಕ್ಕಾಗಿ ಗೆರಿಲ್ಲಾ ಮಾರ್ಕೆಟಿಂಗ್ ತಂತ್ರವನ್ನು ಅನುಸರಿಸಿದ್ದಾರೆ. ಗೆರಿಲ್ಲಾ ಮಾರ್ಕೆಟಿಂಗ್ ಎನ್ನುವುದು ಸಾಕಷ್ಟು ಕಂಪನಿಗಳು ಬಳಸುವ ಅಸಾಂಪ್ರದಾಯಿಕ ಮಾರ್ಕೆಟಿಂಗ್ ವಿಧಾನಗಳಲ್ಲಿ ಒಂದು. ಆದರೆ ಈ ಗೆರಿಲ್ಲಾ ಮಾರ್ಕೆಟಿಂಗ್​​ ಕಾನೂನುಬಾಹಿರವಾಗಿದೆ ಎಂಬುವುದನ್ನು ತಿಳಿಯದೆ ಈ ರೀತಿಯಾಗಿ ಮಾಡಿರುವುದಾಗಿ ಅರುಣ್​ ವಿಚಾರಣೆ ವೇಳೆ ಹೇಳಿಕೊಂಡಿದ್ದಾರೆ.

ಅಲ್ಲದೆ ತಮ್ಮ ಚಾಕೊಲೇಟ್ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಕ್ಯೂಆರ್ ಕೋಡ್‌ಗಳನ್ನು ಅಂಟಿಸುತ್ತಿರುವುದಾಗಿ ಅರುಣ್​ ಹೇಳಿದ್ದಾರೆಂದು ಅವರು ಹೇಳಿದರು. ಅಷ್ಟೇ ಅಲ್ಲದೆ QR ಕೋಡ್ ಅನ್ನು ಸ್ಕ್ಯಾನ್ ಮಾಡುವುದರೊಂದಿಗೆ ಜನರು ಅಥವಾ ಗ್ರಾಹಕರು ‘ಡೈಜ್ ಕಪಲ್ ಚಾಕೊಲೆಟ್’ ಅನ್ನು ಹೇಗೆ ಖರೀದಿಸುತ್ತಾರೆ ಎಂಬುದನ್ನು ಸಹ ಅವರು ತೋರಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಮೆಟ್ರೋ ನಿಲ್ದಾಣದಲ್ಲಿ ಪ್ರಚಾರ ಭಿತ್ತಿಪತ್ರಗಳಿಗೆ ಅನುಮತಿ ಕಡ್ಡಾಯ

ನಮ್ಮ ಮೆಟ್ರೋ ಅಧಿಕಾರಿಯೊಬ್ಬರ ಹೇಳಿಕೆ ಪ್ರಕಾರ, ಮೆಟ್ರೋ ಆವರಣದಲ್ಲಿ ಯಾವುದೇ ಜಾಹೀರಾತಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯಬೇಕು. ಜಾಹೀರಾತುದಾರರು ಮೆಟ್ರೋ ಸಂಸ್ಥೆಗೆ ಪಾವತಿಸುವುದರೊಂದಿಗೆ ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ. ಸದ್ಯ ಆಸ್ತಿ ನಷ್ಟ ತಡೆ ಕಾಯ್ದೆ, ಕರ್ನಾಟಕ ತೆರೆದ ಸ್ಥಳಗಳ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 427 ಅಡಿಯಲ್ಲಿ ಅರುಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಸದ್ಯ ಅರುಣ್​ರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಚುನಾವಣೆ ಮುಗಿದ ಬಳಿಕ ನಾವು ಮತ್ತೊಮ್ಮೆ ವಿಚಾರಣೆ ಮಾಡುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT