ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣ: ಅಶೋಕಣ್ಣ, ವಿಜಯೇಂದ್ರ ತಮ್ಮ ನಿಲುವು ಸ್ಪಷ್ಟಪಡಿಸಲಿ; ಲಕ್ಷ್ಮಿ ಹೆಬ್ಬಾಳ್ಕರ್

16ರಿಂದ 50 ವರ್ಷ ವಯಸ್ಸಿನ ‌300ಕ್ಕೂ ಅಧಿಕ ಮಹಿಳೆಯರ ಮೇಲೆ ನಡೆದ ನೀಚ ಕೃತ್ಯವನ್ನು ಬಿಜೆಪಿಗರು ಖಂಡಿಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಹರಿದಾಡುತ್ತಿವೆ. ಹಾಸನದ ಹಾಲಿ ಸಂಸದರಿಂದ ಅಧಿಕಾರ ದುರುಪಯೋಗ ಆಗಿದೆ. 16ರಿಂದ 50 ವರ್ಷ ವಯಸ್ಸಿನ ‌300ಕ್ಕೂ ಅಧಿಕ ಮಹಿಳೆಯರ ಮೇಲೆ ನಡೆದ ನೀಚ ಕೃತ್ಯವನ್ನು ಬಿಜೆಪಿಗರು ಖಂಡಿಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಅನ್ಯಾಯವಾದಾಗ, ಬಿಜೆಪಿ ನೈತಿಕ ಬಲ ತುಂಬುತ್ತದೆ. ನ್ಯಾಯ ಕೋರಿ ಹೋರಾಟಕ್ಕೆ ಇಳಿಯುತ್ತದೆ. ಆದರೆ, ನೂರಾರು ಮಹಿಳೆಯರಿಗೆ ಅನ್ಯಾಯವಾಗಿರುವ ಈ ಪ್ರಕರಣದ ಕುರಿತಾಗಿ ಆ ಪಕ್ಷದ ಯಾವ ನಾಯಕರೂ ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.

ಇದು ಇಡೀ ಸಮಾಜವೇ ತಲೆ ತಗ್ಗಿಸುವಂಥ ಘಟನೆ‌. ಬಿಜೆಪಿ ಮುಖಂಡ ದೇವರಾಜಗೌಡ ಮತ್ತು ಮಾಜಿ ಶಾಸಕ ಪ್ರೀತಮ್‌ ಗೌಡ ಅವರು, ಪ್ರಜ್ವಲ್‌ ಲೈಂಗಿಕ ದೌರ್ಜನ್ಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ತಿಳಿಸಿದ್ದರು. ಆದರೆ, ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು.

ಪ್ರಜ್ವಲ್‌ ಅವರಿಂದ ಎಷ್ಟು ಮಹಿಳೆಯರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂಬುದು ತನಿಖೆ ನಂತರವೇ ತಿಳಿಯಲಿದೆ. ಅವರು ಸಂಸದರಾಗಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಯೇ ಅಥವಾ ಬೇರೆ ಆಮಿಷವೊಡ್ಡಿ ಮೋಸ ಮಾಡಿದ್ದಾರೆಯೇ ಎಂಬುದನ್ನು ನೋಡಬೇಕಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾದಾಗ, ಬಿಜೆಪಿ ನಾಯಕರು ರಾಜ್ಯದಾದ್ಯಂತ ಪ್ರತಿಭಟಿಸಿದ್ದರು. ಆದರೆ, ಪ್ರಜ್ವಲ್ ಕರ್ಮಕಾಂಡದ ವಿಷಯ ಬಂದಾಗ ಅದೇ ನಾಯಕರು ಕುರುಡರು ಮತ್ತು ಕಿವುಡರಂತೆ ವರ್ತಿಸುತ್ತಿದ್ದಾರೆ’ ಎಂದು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT