ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ಈಜಲು ತೆರಳಿದ್ದ ಬೆಂಗಳೂರು ಮೂಲದ ಐವರು ಕಾಲೇಜು ವಿದ್ಯಾರ್ಥಿಗಳು ನೀರು ಪಾಲು

ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟಿನಲ್ಲಿ ನಡೆದಿದೆ.

ರಾಮನಗರ: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟಿನಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದಲ್ಲಿ ಈಜಲು ಹೋದವರು ನಾಪತ್ತೆಯಾಗಿದ್ದರು. ಇದೀಗ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೀಣ್ಯ ಎರಡನೇ ಹಂತದ ಹರ್ಷಿತ(20), ಅಭಿಷೇಕ್(20), ತೇಜಸ್(21), ವರ್ಷಾ(20) ಹಾಗೂ ಸ್ನೇಹ(19) ಮೃತರು. ಮೇಕೆದಾಟು ಬಳಿ ಆಳವಾದ ಜಾಗದಲ್ಲಿ ಈಜುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ‌ ಕೊನೆಯುಸಿರೆಳೆದಿದ್ದಾರೆ.

ಕಾವೇರಿ ನದಿಯಿಂದ ಐವರು ವಿದ್ಯಾರ್ಥಿಗಳ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹೊರತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣೆ ಪೊಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಿಂದ ಒಟ್ಟು 12 ವಿದ್ಯಾರ್ಥಿಗಳ ಇಲ್ಲಿಗೆ ಬಂದಿದ್ದರು. ಈ ಪೈಕಿ ಐವರು ಈಜುತ್ತಿದ್ದ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. ಉಳಿದ ಏಳು ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ನೀರಿನಲ್ಲಿ ಮುಳುಗಿದ ನಂತರ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT