ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರದ ಇಂಡಿಗನತ್ತ ಮತಗಟ್ಟೆ: ಮರು ಮತದಾನ ಪ್ರಗತಿಯಲ್ಲಿ

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರಿನ ಇಂಡಿಗನಾಥ ಮತಗಟ್ಟೆಯಲ್ಲಿ ಸೋಮವಾರ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಮರು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರಿನ ಇಂಡಿಗನಾಥ ಮತಗಟ್ಟೆಯಲ್ಲಿ ಸೋಮವಾರ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಮರು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಚಾಮರಾಜನಗರ ಜಿಲ್ಲೆಯ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಎಪ್ರಿಲ್ 26ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಧ್ವಂಸಗೊಳಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿತ್ತು. ಜಿಲ್ಲಾಡಳಿತದ ಪ್ರಕಾರ, ಸಮರ್ಪಕ ಮೂಲಸೌಕರ್ಯ ಅಭಿವೃದ್ಧಿಯ ಕೊರತೆಯನ್ನು ಮುಂದಿಟ್ಟು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಈ ಹಿಂದೆ ನಿರ್ಧರಿಸಿದ್ದರು. ಆದರೆ, ಸ್ಥಳೀಯ ಅಧಿಕಾರಿಗಳ ಭರವಸೆ ಮತ್ತು ಪ್ರಯತ್ನದ ನಂತರ ಮತದಾನ ನಡೆಯುತ್ತಿದೆ.

ಏಪ್ರಿಲ್ 26 ರಂದು ಒಂದು ಗುಂಪು ಮತದಾನ ಮಾಡಲು ಬಯಸಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಉತ್ಸುಕವಾಗಿತ್ತು, ಇದು ಅವರ ನಡುವೆ ಘರ್ಷಣೆಗೆ ಕಾರಣವಾಗಿ ಇವಿಎಂಗಳನ್ನು ಹಾನಿಗೊಳಿಸಿದರು ಮತ್ತು ಕಲ್ಲು ತೂರಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಸಾಮಾನ್ಯ ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಮತ್ತು ಎಲ್ಲಾ ವಸ್ತುಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 146ರಲ್ಲಿ ಶುಕ್ರವಾರ ನಡೆದ ಮತದಾನವನ್ನು ಶುಕ್ರವಾರ ಅನೂರ್ಜಿತವಾಗಿತ್ತುಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿರುವ ಇಸಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT