ಬೆಂಗಳೂರಿನಲ್ಲಿ ದಾಖಲೆ ಬರೆದ ತಾಪಮಾನ 
ರಾಜ್ಯ

Weather Report: ಬೆಂಗಳೂರಿನಲ್ಲಿ ದಾಖಲೆ ತಾಪಮಾನ, 'ಉದ್ಯಾನ ನಗರಿ' ಇತಿಹಾಸದಲ್ಲೇ 2ನೇ ಗರಿಷ್ಠ Temperature

ಉದ್ಯಾನ ನಗರಿ ಬೆಂಗಳೂರಿನಲ್ಲಿ ಬೇಸಿಗೆ ಧಗೆ ಮುಂದುವರೆದಿದ್ದು, ನಗರದಲ್ಲಿನ ತಾಪಮಾನ ಏರಿಕೆ ಮತ್ತೊಂದು ದಾಖಲೆಯನ್ನೇ ನಿರ್ಮಿಸಿದೆ.

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಬೇಸಿಗೆ ಧಗೆ ಮುಂದುವರೆದಿದ್ದು, ನಗರದಲ್ಲಿನ ತಾಪಮಾನ ಏರಿಕೆ ಮತ್ತೊಂದು ದಾಖಲೆಯನ್ನೇ ನಿರ್ಮಿಸಿದೆ.

ಹೌದು.. ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಬಿಸಿಲ ಬೇಗೆ ಹೆಚ್ಚುತ್ತಲೇ ಇದ್ದು, ಜನರನ್ನು ಹೈರಾಣಾಗಿಸಿದೆ. ಭಾನುವಾರ ಸಿಲಿಕಾನ್‌ ಸಿಟಿಯಲ್ಲಿ ದಾಖಲೆಯ 38.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಇದು ಬೆಂಗಳೂರು ಇತಿಹಾಸದಲ್ಲೇ 2ನೇ ಗರಿಷ್ಠ ತಾಪಮಾನ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ 50 ವರ್ಷಗಳಲ್ಲಿ ಏಪ್ರಿಲ್‌ ತಿಂಗಳಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ಹಾಗೂ ಒಟ್ಟಾರೆ ಮೂರನೇ ಅತಿ ಹೆಚ್ಚು ತಾಪಮಾನವಾಗಿದೆ. ಈ ಹಿಂದೆ 2016 ಏಪ್ರಿಲ್‌ 25 ರಂದು ನಗರದಲ್ಲಿ 39.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಇದಕ್ಕೂ ಮೊದಲು 1931ರ ಮೇ 22 ರಂದು 38.9 ಡಿಗ್ರಿ ಹಾಗೂ 1931 ರ ಏಪ್ರಿಲ್‌ 30ರಂದು 38.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು.

40 ಡಿಗ್ರಿಗೆ ಏರಿಕೆ ಸಾಧ್ಯತೆ

ಹವಮಾನ ಇಲಾಖೆಯ ಮೂಲಗಳ ಪ್ರಕಾರ ಬೆಂಗಳೂರಿನ ಹಾಲಿ ಪರಿಸ್ಥಿತಿ ಅವಲೋಕಿಸಿದರೆ, ಬೆಂಗಳೂರಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. ಸದ್ಯಕ್ಕಂತೂ ಬೆಂಗಳೂರಿನಲ್ಲಿ ಮಳೆ ಅಥವಾ ತಂಪುಗಾಳಿಯ ಯಾವುದೇ ಸುಳಿವಿಲ್ಲದೇ ಇರುವುದು ಬೆಂಗಳೂರಿಗರನ್ನು ಹೈರಾಣಾಗಿಸಿದೆ. ಹವಾಮಾನ ಇಲಾಖೆ ಕೂಡ ಸದ್ಯಕ್ಕಂತೂ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇಲ್ಲ ಎಂದು ಹೇಳಿರುವುದು ನಗರ ನಿವಾಸಿಗಳು ಮತ್ತಷ್ಟು ಪರಿತಪಿಸುವಂತೆ ಮಾಡಿದೆ.

ಇಂದೂ ಕೂಡ ದಾಖಲೆಯ ತಾಪಮಾನ

ನಿನ್ನೆಯಷ್ಟೇ ಅಲ್ಲ.. ಇಂದೂ ಕೂಡ ಬೆಂಗಳೂರಿನಲ್ಲಿ 38.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಈ ಬಗ್ಗೆ ಹವಮಾನ ಇಲಾಖೆ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ಇಂದು 38.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಎಚ್ ಎಎಲ್ ಭಾಗದಲ್ಲಿ 37.6 ಡಿಗ್ರಿ ತಾಪಮಾನ ದಾಖಲಾಗಿದೆ. ಅಂತೆಯೇ ಕೆಂಪೇಗೌಡ ವಿಮಾನ ನಿಲ್ದಾಣದ ಭಾಗದಲ್ಲಿ ಇಂದು 38.2 ಡಿಗ್ರಿ ತಾಪಮಾನ ದಾಖಲಾಗಿದ್ದು, ಜಿಕೆವಿಕೆ ಭಾಗದಲ್ಲಿ 37 ಡಿಗ್ರಿ ತಾಪಮಾನ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT