ಸಾಂದರ್ಭಿಕ ಚಿತ್ರ  
ರಾಜ್ಯ

ಬೆಂಗಳೂರು: ಚಾಕುವಿನಿಂದ ಪರಸ್ಪರ ಇರಿದುಕೊಂಡ ಅಮ್ಮ-ಮಗಳು; ತಾಯಿಗೆ ಚಿಕಿತ್ಸೆ, ಪುತ್ರಿ ಸಾವು!

ತಾಯಿ ಮಗಳು ಜಗಳವಾಡಿಕೊಂಡು ಪರಸ್ಪರ ಚಾಕುವಿನಿಂದ ಇರಿದುಕೊಂಡಿದ್ದು, ಮಗಳು ಮೃತಪಟ್ಟು ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಬನಶಂಕರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು: ತಾಯಿ ಮಗಳು ಜಗಳವಾಡಿಕೊಂಡು ಪರಸ್ಪರ ಚಾಕುವಿನಿಂದ ಇರಿದುಕೊಂಡಿದ್ದು, ಮಗಳು ಮೃತಪಟ್ಟು ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಬನಶಂಕರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

19 ವರ್ಷದ ಪಿಯುಸಿ ವಿದ್ಯಾರ್ಥಿನಿ ಸಾಹಿತಿ ಮೃತಪಟ್ಟ ಯುವತಿ. ಶಾಸ್ತ್ರಿನಗರದಲ್ಲಿ ಸಾಹಿತಿ ಮತ್ತು ಅವರ ತಾಯಿ ವಾಸವಾಗಿದ್ದರು. ಕೆಲವು ವರ್ಷಗಳ ಹಿಂದೆ ಅವರ ತಂದೆ ಮೃತಪಟ್ಟಿದ್ದರು. ತಾಯಿ ಮತ್ತು ಮಗಳು ಪದೇ ಪದೇ ಜಗಳವಾಡುತ್ತಿದ್ದರು.

ಎಂದಿನಂತೆ ಸೋಮವಾರವೂ ಇಬ್ಬರ ನಡುವೆ ಜಗಳವಾಗಿದೆ. ರಾತ್ರಿ ಸುಮಾರು 7. 30 ರ ವೇಳೆಗೆ ಜಗಳ ಆರಂಭವಾಗಿದೆ, ಇಬ್ಬರೂ ಚಾಕುಗಳನ್ನು ಎತ್ತಿಕೊಂಡು ಪರಸ್ಪರ ಇರಿದುಕೊಂಡಿದ್ದಾರೆ. ತಾಯಿ ಮಗಳ ಕುತ್ತಿಗೆ ಮತ್ತು ಹೊಟ್ಟೆಗೆ ಮೂರು ಬಾರಿ ಇರಿದಿದ್ದರೆ, ಮಗಳು ತನ್ನ ತಾಯಿಗೆ ನಾಲ್ಕು ಬಾರಿ ಇರಿದಿದ್ದಾಳೆ. ಗಲಾಟೆ ಕೇಳಿದ ಅಕ್ಕಪಕ್ಕದವರು ಅವರ ಮನೆಗೆ ಧಾವಿಸಿ, ಇಬ್ಬರೂ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು.

ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿ ಸಾಹಿತಿ ಮೃತಪಟ್ಟಿದ್ದಾರೆ. ಅವರ ತಾಯಿ ಸಹ ಚಾಕು ಇರಿತದಿಂದ ಗಾಯಗೊಂಡಿದ್ದಾರೆ. ಅಪಾಯದಿಂದ ಪಾರಾಗಿರುವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಇಬ್ಬರು ಮಾತ್ರ ಮನೆಯಲ್ಲಿ ವಾಸಿಸುತ್ತಿದ್ದರು. ತಾಯಿ ಚೇತರಿಸಿಕೊಂಡ ನಂತರವಷ್ಟೇ ಘಟನೆಗೆ ಕಾರಣ ತಿಳಿದು ಬರಲಿದ್ದು, ಆಕೆಯ ಹೇಳಿಕೆ ದಾಖಲಿಸಿಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಬನಶಂಕರಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT