ಬರಿದಾದ ಕಾವೇರಿ ಒಡಲು (ಸಂಗ್ರಹ ಚಿತ್ರ)  online desk
ರಾಜ್ಯ

ರಾಜ್ಯದಲ್ಲಿ ಬರದ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ!

ರಾಜ್ಯದಲ್ಲಿ ಬೇಸಿಗೆ ತೀವ್ರಗೊಂಡು ಬರ ಎದುರಾಗಿರುವಾಗ ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ.

ನವದೆಹಲಿ: ರಾಜ್ಯದಲ್ಲಿ ಬೇಸಿಗೆ ತೀವ್ರಗೊಂಡು ಬರ ಎದುರಾಗಿರುವಾಗ ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ.

2.5 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಆಗ್ರಹಿಸಿದೆ. "ನಮಗೆ ಈ ತಿಂಗಳು ಬರಬೇಕಿರುವ 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಒತ್ತಾಯಿಸಿದೆ.

ಅಷ್ಟೇ ಅಲ್ಲದೇ ಕರ್ನಾಟಕಕ್ಕೆ ಕುಡಿಯುವುದಕ್ಕೆ 0.5 ಟಿಎಂಸಿ ನೀರು ಸಾಕು, ಕುಡಿಯುವ ನೀರಿನ ನೆಪ ಹೇಳಿ ನೀರು ಬಿಡುಗಡೆಗೆ ನಿರಾಕರಿಸಬಾರದೆಂದು ಸಭೆಯಲ್ಲಿ ವಾದಿಸಿದೆ.

‘ಮಳೆಯ ಕೊರತೆ ಕಾರಣ ನೀಡಿ ಕರ್ನಾಟಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಿಲ್ಲ, ನಿಗಧಿತ ಪ್ರಮಾಣದ ನೀರು ಹರಿಸಿಲ್ಲ. ಫೆ.1 ರಿಂದ ಏಪ್ರಿಲ್ 28 ವರೆಗೂ ಪರಿಸರಕ್ಕೆ 7.33 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಕರ್ನಾಟಕ 5.31 ಟಿಎಂಸಿ ನೀರು ಮಾತ್ರ ಹರಿಸಿದೆ ಇದರಲ್ಲೂ 2.016 ಟಿಎಂಸಿ ಬಾಕಿ ಉಳಿಸಿಕೊಂಡಿದೆ. ಮೆಟ್ಟೂರಿನಲ್ಲಿ 20 ಟಿಎಂಸಿಯಷ್ಟು ನೀರಿದೆ. ಕುಡಿಯಲು ಮತ್ತು ಪರಿಸರಕ್ಕೆ ಬಳಸಲಾಗುತ್ತಿದೆ. ಬಾಕಿ ಉಳಿಸಿಕೊಂಡ ಪರಿಸರ ಬಳಕೆ ನೀರು ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಅಧಿಕಾರಿಗಳು ಬೇಡಿಕೆ ಮುಂದಿಟ್ಟಿದ್ದಾರೆ.

ತಮಿಳುನಾಡಿನ ವಾದಕ್ಕೆ ಕರ್ನಾಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ. ‘ರಾಜ್ಯದಲ್ಲಿ ಭೀಕರ ಬರದಿಂದ ಕುಡಿಯುವ ನೀರಿನ ಸಮಸ್ಯೆಯಾಗಿದೆ. ನೀರು ಹರಿಸಲು ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲವೆಂದು ವಾದ ಮಂಡಿಸಿದೆ. ರಾಜ್ಯಗಳ ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ, ಮೇ 16ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT