ಬತ್ತಿದ ಕಾವೇರಿ ನದಿಯ ಜಲಾನಯನ ಪ್ರದೇಶ - ಟ್ಯಾಂಕರ್‌ 
ರಾಜ್ಯ

ಉಗಮ ಸ್ಥಾನದಲ್ಲೆ ಬರಿದಾದ ಕಾವೇರಿ; ಕೊಡಗಿನಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ!

ಕಾವೇರಿ ನದಿ ಸಂಪೂರ್ಣವಾಗಿ ಬತ್ತಿ ಹೋದ ದೃಶ್ಯಗಳು ಇಲ್ಲಿನ ನಿವಾಸಿಗಳಿಗೆ ಆತಂಕ ಉಂಟು ಮಾಡಿದ್ದು, ಕುಡಿಯುವ ನೀರು ಪೂರೈಕೆಗಾಗಿ ಅಧಿಕಾರಿಗಳು ಬೋರ್‌ವೆಲ್‌ನಿಂದ ನೀರು ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ಮಡಿಕೇರಿ: ಜೀವನದಿ ಕಾವೇರಿ ಉಗಮ ಸ್ಥಾನ ಕೊಡಗಿನಲ್ಲೇ ಬರಿದಾಗಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಕುಶಾಲನಗರದಾದ್ಯಂತ ಕಾವೇರಿ ನದಿ ಬತ್ತಿ ಹೋಗಿದ್ದರಿಂದ ಎಕರೆಗಟ್ಟಲೆ ಭೂಮಿ ಬರಡಾಗಿದೆ.

ಸಾಮಾನ್ಯವಾಗಿ ನದಿಯಡಿಯಲ್ಲಿ ಮುಳುಗಿರುತ್ತಿದ್ದ ಬಂಡೆಯ ತುಣುಕುಗಳು ಈಗ ಕಾಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಬಿಕ್ಕಟ್ಟಿನ ಬಗ್ಗೆ ಸುಳಿವು ನೀಡುತ್ತಿದೆ. ಅಮೃತ್ 2.0 ರ ಮಹಾ ಯೋಜನೆಯ ಮೂಲಕ ಕುಶಾಲನಗರದಾದ್ಯಂತ ನೀರಿನ ಬಿಕ್ಕಟ್ಟನ್ನು ಕೊನೆಗೊಳಿಸುವ ಭರವಸೆ ನೀಡಿದ್ದರೂ, ಪೈಪ್‌ಲೈನ್ ಪೂರೈಕೆಯನ್ನು ಸಕ್ರಿಯಗೊಳಿಸಲು ನದಿಯಲ್ಲಿ ನೀರೇ ಇಲ್ಲ.

ಕಾವೇರಿ ನದಿ ಸಂಪೂರ್ಣವಾಗಿ ಬತ್ತಿ ಹೋದ ದೃಶ್ಯಗಳು ಇಲ್ಲಿನ ನಿವಾಸಿಗಳಿಗೆ ಆತಂಕ ಉಂಟು ಮಾಡಿದ್ದು, ಕುಡಿಯುವ ನೀರು ಪೂರೈಕೆಗಾಗಿ ಅಧಿಕಾರಿಗಳು ಬೋರ್‌ವೆಲ್‌ನಿಂದ ನೀರು ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ಕುಶಾಲನಗರದಲ್ಲಿ ಈ ವರ್ಷ ಶೇ.50ಕ್ಕಿಂತ ಕಡಿಮೆ ಮಳೆಯಾಗಿದ್ದು, ನೀರಿನ ಸಮಸ್ಯೆ ಉತ್ತುಂಗದಲ್ಲಿದೆ. ಈ ವರ್ಷದ ಮಾರ್ಚ್ ಆರಂಭದಲ್ಲಿ, ಕುಶಾಲನಗರ ಪುರಸಭೆಯಾದ್ಯಂತ 32,000 ಕ್ಕೂ ಹೆಚ್ಚು ಜನಸಂಖ್ಯೆಗೆ ಪೈಪ್‌ಲೈನ್ ನೀರು ಸರಬರಾಜು ಮಾಡಲು ಬೈಚನಹಳ್ಳಿ ಬಳಿ ನೀರೆತ್ತುವ ಯಂತ್ರಾಗಾರ ಬಳಿ ನದಿಯಿಂದ ನೀರು ದೊರೆಯದೆ ನೀರು ಸರಬರಾಜು ಮಂಡಳಿಯಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಹೀಗಾಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

'ಹತ್ತು ವರ್ಷಗಳ ಹಿಂದೆ ಸ್ಥಳೀಯ ಅಧಿಕಾರಿಗಳು ಹಾರಂಗಿ ಜಲಾಶಯದಿಂದ ಕುಶಾಲನಗರಕ್ಕೆ 80 ಕೋಟಿ ರೂ.ವೆಚ್ಚದಲ್ಲಿ ಕುಡಿಯುವ ನೀರು ತರಲು ಯೋಜನೆ ರೂಪಿಸಿದ್ದರು. ಕುಶಾಲನಗರ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಮಂಡಿಸಲಾಯಿತು. ಆದರೆ, ಈ ಯೋಜನೆ ಕಾರ್ಯರೂಪಕ್ಕೆ ಬರಲೇ ಇಲ್ಲ’ ಎಂದು ಕುಶಾಲನಗರದ ನಿವಾಸಿ ಹಾಗೂ ರೈತ ಕೆ.ಎಸ್.ಮೂರ್ತಿ ನೆನಪಿಸಿಕೊಂಡರು.

ಕುಶಾಲನಗರದಲ್ಲಿ ಕಾವೇರಿ ನದಿಗೆ ನೀರಿನ ಅಭಾವ ತಲೆದೋರಿದ್ದು, ಇದೀಗ ಪುರಸಭೆಯವರು ಕೊಳವೆಬಾವಿಗಳ ಮೊರೆ ಹೋಗಿದ್ದಾರೆ. ಟಿಎಂಸಿ ಮಿತಿಯಲ್ಲಿ ಐದು ಕೊಳವೆ ಬಾವಿಗಳಿದ್ದು, ಎಲ್ಲ ಮನೆಗಳಿಗೆ ಐದು ಟ್ಯಾಂಕರ್‌ಗಳ ಮೂಲಕ ಪ್ರತಿದಿನ 3 ಲಕ್ಷ ಲೀಟರ್‌ ನೀರು ಪೂರೈಸಲಾಗುತ್ತಿದೆ ಎಂದು ಕುಶಾಲನಗರ ವಿಭಾಗದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ಆನಂದ್‌ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT