ಲಕ್ಷ್ಮಣ್ ಸವದಿ 
ರಾಜ್ಯ

ಭೀತಿ ಹುಟ್ಟಿಸಿದ ಕೃಷ್ಣೆ: ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ; ಅಧಿಕಾರಿಗಳಿಗೆ ಲಕ್ಷ್ಮಣ್ ಸವದಿ ಸೂಚನೆ

ಕೃಷ್ಣಾ ನದಿಯ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಲಕ್ಷ್ಮಣ್ ಸವದಿ ಅವರು ಬುಧವಾರ ತುರ್ತು ಸಭೆ ನಡೆಸಿದರು.

ಅಥಣಿ: ಕೃಷ್ಣಾ ನದಿ ಪ್ರವಾಹ ಇಳಿಕೆಯಾಗದ ಕಾರಣ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿಯವರು ಬುಧವಾರ ಸೂಚನೆ ನೀಡಿದರು.

ಕೃಷ್ಣಾ ನದಿಯ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕರು ಬುಧವಾರ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರವಂತೆ ಹೆಚ್ಚುವರಿ ಪುನರ್ವಸತಿ ಕೇಂದ್ರಗಳು, ವೈದ್ಯಕೀಯ ಉಪಕರಣಗಳು, ಔಷಧಿಗಳು, ಆಹಾರ ಉತ್ಪನ್ನ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳ ನಡೆಸುವತೆ ಸೂಚನೆ ನೀಡಿದರು.

ಯಾವುದೇ ಕ್ಷಣದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆಯಿರುವ ಗ್ರಾಮಗಳಲ್ಲಿ ಅಲ್ಲಿನ ಜನರನ್ನು ಮುಂಚಿತವಾಗಿ ಸ್ಥಳಾಂತರಿಬೇಕು. ಪ್ರತಿಯೊಬ್ಬ ನೋಡಲ್ ಅಧಿಕಾರಿ ಮತ್ತು ಇತರ ಸಂಬಂಧಪಟ್ಟ ಸಿಬ್ಬಂದಿಗಳು ಪ್ರವಾಹದ ಸಮಯದಲ್ಲಿ ನಿಯೋಜನೆಗೊಂಡ ಗ್ರಾಮದಲ್ಲಿಯೇ ಮೊಕ್ಕಾಂ ಹೂಡಿರಬೇಕು ಎಂದೂ ಇದೇ ವೇಳೆ ಸೂಚಿಸಿದರು.

ಸಭೆ ಬಳಿಕ ಶಾಸಕರು ಶಿರಟ್ಟಿ, ನಂದೇಶ್ವರ, ಸಪ್ತಸಾಗರ ಸೇರಿದಂತೆ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ