ಲಕ್ಷ್ಮಣ್ ಸವದಿ 
ರಾಜ್ಯ

ಭೀತಿ ಹುಟ್ಟಿಸಿದ ಕೃಷ್ಣೆ: ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ; ಅಧಿಕಾರಿಗಳಿಗೆ ಲಕ್ಷ್ಮಣ್ ಸವದಿ ಸೂಚನೆ

ಕೃಷ್ಣಾ ನದಿಯ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಲಕ್ಷ್ಮಣ್ ಸವದಿ ಅವರು ಬುಧವಾರ ತುರ್ತು ಸಭೆ ನಡೆಸಿದರು.

ಅಥಣಿ: ಕೃಷ್ಣಾ ನದಿ ಪ್ರವಾಹ ಇಳಿಕೆಯಾಗದ ಕಾರಣ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿಯವರು ಬುಧವಾರ ಸೂಚನೆ ನೀಡಿದರು.

ಕೃಷ್ಣಾ ನದಿಯ ದಡದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕರು ಬುಧವಾರ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸದಾ ಸನ್ನದ್ಧವಾಗಿರವಂತೆ ಹೆಚ್ಚುವರಿ ಪುನರ್ವಸತಿ ಕೇಂದ್ರಗಳು, ವೈದ್ಯಕೀಯ ಉಪಕರಣಗಳು, ಔಷಧಿಗಳು, ಆಹಾರ ಉತ್ಪನ್ನ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳ ನಡೆಸುವತೆ ಸೂಚನೆ ನೀಡಿದರು.

ಯಾವುದೇ ಕ್ಷಣದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆಯಿರುವ ಗ್ರಾಮಗಳಲ್ಲಿ ಅಲ್ಲಿನ ಜನರನ್ನು ಮುಂಚಿತವಾಗಿ ಸ್ಥಳಾಂತರಿಬೇಕು. ಪ್ರತಿಯೊಬ್ಬ ನೋಡಲ್ ಅಧಿಕಾರಿ ಮತ್ತು ಇತರ ಸಂಬಂಧಪಟ್ಟ ಸಿಬ್ಬಂದಿಗಳು ಪ್ರವಾಹದ ಸಮಯದಲ್ಲಿ ನಿಯೋಜನೆಗೊಂಡ ಗ್ರಾಮದಲ್ಲಿಯೇ ಮೊಕ್ಕಾಂ ಹೂಡಿರಬೇಕು ಎಂದೂ ಇದೇ ವೇಳೆ ಸೂಚಿಸಿದರು.

ಸಭೆ ಬಳಿಕ ಶಾಸಕರು ಶಿರಟ್ಟಿ, ನಂದೇಶ್ವರ, ಸಪ್ತಸಾಗರ ಸೇರಿದಂತೆ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT