ಸಚಿವ ಸಂತೋಷ್ ಲಾಡ್ 
ರಾಜ್ಯ

ಕೇರಳ ಗುಡ್ಡ ಕುಸಿತ ದುರಂತ; ಕನ್ನಡಿಗರ ನೆರವಿಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಭೂಕುಸಿತದಲ್ಲಿ ಚಾಮರಾಜನಗರದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, 10 ಜನರನ್ನು ರಕ್ಷಿಸಲಾಗಿದೆ. ಒಡಿಶಾ ಮೂಲದ ಬೆಂಗಳೂರಿನ ವೈದ್ಯರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನೂ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದಾಗದಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ನೇಮಕ ಮಾಡಿದ್ದು, ರಾಜ್ಯದಿಂದ ಕೇರಳಕ್ಕೆ ಆಗಬೇಕಾದ ಸಹಾಯದ ನೇತೃತ್ವ ವಹಿಸಿದೆ.

ಸರ್ಕಾರದ ಸೂಚನೆ ಬೆನ್ನಲ್ಲೇ ಸಂತೋಷ್ ಲಾಡ್ ಅವರು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳೊಂದಿಗೆ ಬುಧವಾರ ಮಧ್ಯಾಹ್ನ ವಯನಾಡಿಗೆ ಭೇಟಿ ನೀಡಿದ್ದು, ನೆರವಿನ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಭೂಕುಸಿತದಲ್ಲಿ ಚಾಮರಾಜನಗರದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, 10 ಜನರನ್ನು ರಕ್ಷಿಸಲಾಗಿದೆ. ಒಡಿಶಾ ಮೂಲದ ಬೆಂಗಳೂರಿನ ವೈದ್ಯರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನೂ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ಇನ್ನೂ ಎಷ್ಟು ಜನರು ವಯನಾಡಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬುದು ತಿಳಿದಿಲ್ಲ. ಇಲ್ಲಿಯವರೆಗೆ ರಕ್ಷಣೆಗೊಳಗಾದ ಕರ್ನಾಟಕ ಮೂಲದವರು ವಯಾನಾಡಿನಲ್ಲಿ ಕಳೆದ ಕಳೆದ 30-40 ವರ್ಷಗಳಿಂದ ವಾಸವಿದ್ದರು ಎಂಬ ಮಾಹಿತಿ ಇದೆ ಎಂದು ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.

ಕೇರಳವು 50 ಫ್ರೀಜರ್ ಬಾಕ್ಸ್‌ಗಳನ್ನು ಕೇಳಿದೆ. ರಾಜ್ಯ ಸರ್ಕಾರ 30ಕ್ಕೆ ವ್ಯವಸ್ಥೆ ಮಾಡಿದೆ. ಇವುಗಳಉ ಬುಧವಾರ ರಾತ್ರಿ ವೇಳೆಗೆ ವಯನಾಡು ತಲುಪಬೇಕು ಎಂದು ಹೇಳಿದರು.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಜೊತೆಗೆ ಮಾತುಕತೆ ನಡೆಸಿದ್ದು, ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.

ದೂರವಾಣಿ ಮೂಲಕ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದ್ದೇವೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಭರವಸೆ ನೀಡಿ ಸಾಂತ್ವನ ಹೇಳಿದ್ದಾರೆ.

ಸದ್ಯ ಸಿಎಂ ಸೂಚನೆ ಮೇರೆಗೆ ವಯನಾಡ್‌ಗೆ ಆಗಮಿಸಿರುವ ಸಚಿವ ಸಂತೋಷ್ ಲಾಡ್ ಅವರು ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂಗೆ ಸಂತೋಷ್ ಲಾಡ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ