ಸಿಎಂ ಸಿದ್ದರಾಮಯ್ಯ - ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಆಸ್ತಿ ತೆರಿಗೆ ‘OTS’ ಕಾಲಾವಧಿ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್

ಈವರೆಗೂ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವಾರಿಯಾಗಿ 400 ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ.

ಬೆಂಗಳೂರು: ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31)ಯನ್ನು ಒಂದು ತಿಂಗಳ ಕಾಲ (ಆಗಸ್ಟ್ 31) ವಿಸ್ತರಣೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

11ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವಾರಿಯಾಗಿ 400 ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ. ಕೆಲವರು ಚೆಕ್ ನೀಡಿದ್ದು, ಸರ್ವರ್ ಸಮಸ್ಯೆ ಕಂಡು ಬಂದಿದೆ. ಹೀಗಾಗಿ ಜುಲೈ 31ರವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದರು.

ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯವಾಗಿ ಗಾಬರಿಯಾಗುವುದು ಬೇಡ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಜನಾಂದೋಲನ ಯಾತ್ರೆ ಬಗ್ಗೆ ಮಾತನಾಡಿ, ಬಿಜೆಪಿಯ ಪಾದಯಾತ್ರೆಗೆ ಅರ್ಥ ಅಥವಾ ವಿಷಯ ಯಾವುದೂ ಇಲ್ಲ. ಅವರ ಪಾದಯಾತ್ರೆ ವಿಚಾರ ಏನು? ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದಾದರೂ ಹೊಸ ಹಗರಣಗಳಿದ್ದರೆ ಅವರು ಹೇಳಲಿ. ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರ. ಹೀಗಾಗಿ ನಾವು ಅವರ ಕಾಲದ ಹಗರಣಗಳ ಬಗ್ಗೆ, ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರತಿನಿತ್ಯ ಮೂರ್ನಾಲ್ಕು ಪ್ರಶ್ನೆ ಕೇಳುತ್ತೇವೆ, ಅವರು ಉತ್ತರ ನೀಡಲಿ ಎಂದು ಸವಾಲೆಸೆದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT