ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣ  
ರಾಜ್ಯ

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣ: ಆಕಸ್ಮಿಕವಾಗಿ ಹಳಿಗೆ ಬಿದ್ದ ಬಾಲಕನ ರಕ್ಷಣೆ

ಹಳಿಯ ಮೇಲೆ ಬಿದ್ದ ಬಾಲಕನನ್ನು ತಕ್ಷಣವೇ ಭದ್ರತಾ ಸಿಬ್ಬಂದಿ ಸಹಾಯದಿಂದ ಪ್ಲಾಟ್ ಫಾರ್ಮ್ ಗೆ ಕರೆತರಲಾಯಿತು.

ಬೆಂಗಳೂರು: ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ರೈಲಿಗೆ ಕಾಯುತ್ತಿದ್ದ ವೇಳೆ ನಾಲ್ಕು ವರ್ಷದ ಬಾಲಕ ಆಕಸ್ಮಿಕವಾಗಿ ಹಳಿ ಮೇಲೆ ಬಿದ್ದ ಘಟನೆ ಕಳೆದ ರಾತ್ರಿ ನಡೆದಿದೆ.

ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಪ್ಲಾಟ್ ಫಾರ್ಮ್ 2ರಲ್ಲಿ ತನ್ನ ಒಡಹುಟ್ಟಿದವರೊಂದಿಗೆ ನಾಲ್ಕು ವರ್ಷದ ಬಾಲಕ ಆಟವಾಡುತ್ತಿದ್ದ. ಆಕಸ್ಮಿಕವಾಗಿ ಜಾರಿ ಕೆಳಗೆ ಹಳಿ ಮೇಲೆ ಬಿದ್ದಿದ್ದಾನೆ. ಇದನ್ನು ಗಮನಿಸಿ ಕೂಡಲೇ ತುರ್ತುರೈಲು ನಿಲುಗಡೆ ವ್ಯವಸ್ಥೆಯ ಮೂಲಕ ನಿಲ್ದಾಣದ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ ಪ್ಲಾಟ್ ಫಾರ್ಮ್ 1 ಮತ್ತು 2ರಲ್ಲಿ ರೈಲು ಸಂಚಾರವನ್ನು ನಿಲ್ಲಿಸಲಾಯಿತು.

ಹಳಿಯ ಮೇಲೆ ಬಿದ್ದ ಬಾಲಕನನ್ನು ತಕ್ಷಣವೇ ಭದ್ರತಾ ಸಿಬ್ಬಂದಿ ಸಹಾಯದಿಂದ ಪ್ಲಾಟ್ ಫಾರ್ಮ್ ಗೆ ಕರೆತರಲಾಯಿತು. ಕಂಟ್ರೋಲ್ ರೂಂಗೆ ಕರೆತಂದು ಬಾಲಕನನ್ನು ಪರೀಕ್ಷಿಸಿದಾಗ ಎಡಕಿವಿ ಮೇಲೆ ಗಾಯವಾಗಿದ್ದು ಬಿಟ್ಟರೆ ಹೆಚ್ಚಿನ ತೊಂದರೆಗಳೇನು ಆಗಿರಲಿಲ್ಲ.

ಹೆಚ್ಚಿನ ಚಿಕಿತ್ಸೆಗಾಗಿ ಮೆಟ್ರೋ ಭದ್ರತಾ ಸಿಬ್ಬಂದಿಯ ಜೊತೆಗೆ ತಾಯಿ ಮತ್ತು ಬಾಲಕನನ್ನು ಸರ್ ಸಿ ವಿ ರಾಮನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು ಯಾವುದೇ ಅಸಹಜತೆ ಕಂಡುಬಂದಿಲ್ಲ ಎಂದು ತಿಳಿಸಿದರು. ಹಾಗೂ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ಅಲ್ಲಿ ಸ್ಕಾನಿಂಗ್ ಮಾಡಿದಾಗ ಯಾವುದೇ ಅಸಹಜತೆ ಕಂಡುಬಂದಿಲ್ಲ. ಹೀಗಾಗಿ ಬಾಲಕನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಎಲ್ಲಾ ಕ್ಲಿಯರೆನ್ಸ್ ಮಾಡಿದ ನಂತರ ರಾತ್ರಿ 9.15ರ ಹೊತ್ತಿಗೆ ರೈಲು ಸೇವೆ ಪುನರಾರಂಭಗೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT