ಬಸವರಾಜ ಬೊಮ್ಮಾಯಿ 
ರಾಜ್ಯ

ST ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮೋದನೆ ಬಿಜೆಪಿಗೆ ಸಿಕ್ಕ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ

ಅತ್ಯಂತ ಹಿಂದುಳಿದ ಎಸ್ಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್ಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಒಳ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.

ಬೆಂಗಳೂರು: ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿರುವುದು ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅತ್ಯಂತ ಹಿಂದುಳಿದ ಎಸ್ಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್ಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಒಳ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.

ನಮ್ಮ ಸರ್ಕಾರ ಒಳ ಮೀಸಲಾತಿಯನ್ನು ಸಂಪುಟದಲ್ಲಿ ಒಪ್ಪಿ, ಸರ್ಕಾರಿ ಆದೇಶವನ್ನು ಮಾಡಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ನಿಲುವನ್ನು ಇಂದು ಏಳು ನ್ಯಾಯಾಧೀಶರನ್ನೊಳಗೊಂಡ ಸರ್ವೋಚ್ಚ ನ್ಯಾಯಾಲಯದ ಸಂವಿಧಾನಿಕ ಪೀಠ ಎತ್ತಿ ಹಿಡಿದಿರುವುದು ಐತಿಹಾಸಿಕ ತೀರ್ಪು ಮತ್ತು ಎಸ್ಸಿ ಜನಾಂಗದ ಒಳ ಮೀಸಲಾತಿ ಹೋರಾಟಕ್ಕೆ ಸಿಕ್ಕ ಜಯ ಎಂದಿದ್ದಾರೆ. ಇದಕ್ಕೆ ಸಹಕಾರ ನೀಡಿದ ನಮ್ಮ ಪ್ರಧಾನಮಂತ್ರಿ @narendramodi ಹಾಗೂ ಅಂದು ಎಸ್ಸಿ ಸಮುದಾಯದ ಸಚಿವರಾದಂತಹ @GovindKarjol ಮತ್ತು ನನ್ನ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಮತ್ತು @BJP4Karnataka ದ ಎಲ್ಲ ನಾಯಕರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತದ್ವಿರುದ್ದವಾಗಿ ಸಂವಿಧಾನದ ಆರ್ಟಿಕಲ್ 341 ಕ್ಕೆ ತಿದ್ದುಪಡಿ ಮಾಡುವುದು ಅತ್ಯಂತ ಅಗತ್ಯತೆಯೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಅದನ್ನು ಇಂದು ಸರ್ವೋಚ್ಚ ನ್ಯಾಯಾಲಯ ತಳ್ಳಿ ಹಾಕಿ ರಾಜ್ಯ ಸರ್ಕಾರ ಎಸ್ಸಿ ಜನಾಂಗಕ್ಕೆ ವಂಚನೆ ಮಾಡುವ ನಿರ್ಣಯವನ್ನು ತಳ್ಳಿ ಹಾಕಿದೆ.

ಈಗ ತಮ್ಮ ಸರ್ಕಾರ ಮಾಡಿರುವ ಶಿಫಾರಸ್ಸಿಗೆ ಜಯ ಸಿಕ್ಕಿದೆ ಎಂಬ ಸುಳ್ಳನ್ನು ಪ್ರಚಾರ ಮಾಡುತ್ತಿರುವುದು ಖಂಡನೀಯ. ನನ್ನ ಮುಖ್ಯಮಂತ್ರಿ ಕಾಲದಲ್ಲಿ ಸಾಮಾಜಿಕ ನ್ಯಾಯ ಅತ್ಯಂತ ತಳ ಸಮುದಾಯಕ್ಕೆ ಸಿಗಬೇಕೆನ್ನುವ ನೀತಿಗೆ ಮತ್ತು ನಿರ್ಣಯಕ್ಕೆ ಜಯ ಸಿಕ್ಕಿರುವಂಥದ್ದು ನನಗೆ ಸಮಾಧಾನ ತಂದಿದೆ. ಎಲ್ಲ ಎಸ್ಸಿ ತಳ ಸಮುದಾಯಗಳಿಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಅಭಿನಂದನೀಯ ಪೂರ್ವಕವಾಗಿ ಹಾರೈಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT